ಆರೋಗ್ಯ

ಕೇಸರಿ ಕರಬೂಜ ಆರೋಗ್ಯಕರ ಹಣ್ಣುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಯಾಕೆ ಗೋತ್ತೆ… ?

Pinterest LinkedIn Tumblr

ಹೊರಗಿನಿಂದ ಬೂದು-ಹಸಿರುಮಿಶ್ರಿತ ಸಿಪ್ಪೆ ಹೊಂದಿದ್ದರೂ ಒಳಗಣ ತಿರುಳು ಕೇಸರಿ ಅಥವಾ ಕಿತ್ತಳೆ ಬಣ್ಣ ಹೊಂದಿರುವ ಕೇಸರಿ ಕರಬೂಜ ಬೇಸಿಗೆಯ ಫಲವಾಗಿದ್ದು ಇತರ ಕರಬೂಜ ಹಣ್ಣುಗಳಂತೆಯೇ ಸಿಹಿಯಾದ ಮತ್ತು ಹೆಚ್ಚು ನೀರಿನಂಶವನ್ನು ಹೊಂದಿರುವ ಹಣ್ಣಾಗಿದೆ.

ಕಲ್ಲಂಗಡಿಯಂತೆಯೇ ಈ ಹಣ್ಣಿನ ಸೇವನೆಯಿಂದ ವಿಶೇಷವಾಗಿ ಬೇಸಿಗೆಯಲ್ಲಿ ಎದುರಾಗುವ ನಿರ್ಜಲೀಕರಣದಿಂದ ಪಾರಾಗಬಹುದು. ಅಷ್ಟೇ ಅಲ್ಲ, ಎಲ್ಲರಿಗೂ ಇಷ್ಟವಾಗುವ ಈ ಹಣ್ಣು ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿರುವವರಿಗೂ ಉತ್ತಮ ಆಯ್ಕೆಯಾಗಿದೆ. ನೀರಿನಂಶ ಮತ್ತು ವಿವಿಧ ಪೋಷಕಾಂಶಗಳು ಹೆಚ್ಚಿದ್ದರೂ ಕ್ಯಾಲೋರಿಗಳು ಕಡಿಮೆ ಇರುವ ಕಾರಣ ಕೊಬ್ಬು ಹೆಚ್ಚಿಸದೇ ದೇಹಕ್ಕೆ ಶಕ್ತಿ ಒದಗಿಸುವ ಮೂಲಕ ಆರೋಗ್ಯಕರ ಹಣ್ಣುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುತ್ತದೆ.

ದಿನಕ್ಕೊಂದು ಗ್ಲಾಸ್ ‘ಕರಬೂಜ ಹಣ್ಣಿನ ಜ್ಯೂಸ್’ ತಪ್ಪದೇ ಕುಡಿಯಿರಿ!
ಇದರಲ್ಲಿ ಕರಗುವ ನಾರು, ಬೀಟಾ ಕ್ಯಾರೋಟೀನ್, ಪೊಟ್ಯಾಶಿಯಂ, ಕಬ್ಬಿಣ, ಮ್ಯಾಂಗನೀಸ್, ಫೋಲಿಕ್ ಆಮ್ಲ, ವಿಟಮಿನ್ ಎ, ಸಿ ಹಾಗೂ ಇತರ ಪ್ರಮುಖ ಪೋಷಕಾಂಶಗಳಿವೆ. ಈ ಕರಬೂಜ ಹಣ್ಣು ರುಚಿಕರ ಮಾತ್ರವಲ್ಲ, ಇದರ ವಿಶಿಷ್ಟ ಪರಿಮಳವೂ ಎಲ್ಲರ ಮನ ಸೆಳೆಯುತ್ತದೆ ಹಾಗೂ ಈ ಹಣ್ಣನ್ನು ಅಡುಗೆಯಲ್ಲಿ ಬಳಸಿದಾಗಲೂ ಈ ಪರಿಮಳ ಆಹಾರದಿಂದ ಹೊಮ್ಮುತ್ತಾ ಆಹಾರವನ್ನು ಇನ್ನಷ್ಟು ರುಚಿಕರವಾಗಿಸುತ್ತವೆ.

ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ
ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣುಗಳಿಗೆ ಅಗತ್ಯವಾದ ಪೋಷಕಾಂಶಗಳಾಗಿದ್ದು ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು ನೆರವಾಗುತ್ತವೆ. ವಿಶೇಷವಾಗಿ ಈ ಪೋಷಕಾಂಶಗಳು ಕಣ್ಣಿನ ಪಾಪೆಯನ್ನು ಇನ್ನಷ್ಟು ಬಲಪಡಿಸುವ ಮೂಲಕ ಸ್ಪಷ್ಟವಾದ ದೃಷ್ಟಿ ಮತ್ತು ನೋಟವನ್ನು ಉತ್ತಮಗೊಳಿಸುತ್ತವೆ. ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಪೊಟ್ಯಾಶಿಯಂ ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುತ್ತದೆ ಹಾಗೂ ಅಧಿಕ ರಕ್ತದೊತ್ತಡವನ್ನು ಕಡಿಮೆಯಾಗಿಸಲು ನೆರವಾಗುತ್ತದೆ. ತೂಕ ಇಳಿಸಲು ನೆರವಾಗುತ್ತದೆ ಇದರಲ್ಲಿ ಅತಿ ಕಡಿಮೆ ಪರ್ಯಾಪ್ತ ಕೊಬ್ಬು ಹಾಗೂ ಅತಿ ಕಡಿಮೆ ಕ್ಯಾಲೋರಿಗಳಿರುವ ಕಾರಣ ತೂಕ ಏರದಿರಲು ನೆರವಾಗುತ್ತದೆ. ಅಲ್ಲದೇ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಕರಗುವ ನಾರು ಹೊಟ್ಟೆ ತುಂಬಿರುವ ಭಾವನೆಯನ್ನು ಮೂಡಿಸಿ ಹೊಟ್ಟೆಯ ಹಸಿವಿನ ಭಾವನೆ ಬರದಂತೆ ನೋಡಿಕೊಳ್ಳುತ್ತದೆ. ತನ್ಮೂಲಕ ಸೇವಿಸಬಹುದಾಗಿದ್ದ ಆಹಾರಸೇವನೆಯಿಂದ ತಡೆದು ತೂಕ ಏರದಂತೆ ಪರೋಕ್ಷವಾಗಿ ನೆರವಾಗುತ್ತದೆ.

ಹೃದಯದ ಕಾಯಿಲೆಗಳಿಂದ ರಕ್ಷಿಸುತ್ತದೆ..
ಈ ಹಣ್ಣಿನಲ್ಲಿರುವ ಪೊಟ್ಯಾಶಿಯಂ ಹೃದಯದ ಕ್ಷಮತೆ ಹೆಚ್ಚಿಸಲು ನೆರವಾಗುತ್ತದೆ. ಇದರಲ್ಲಿರುವ ಅಡಿನೋಸಿನ್ ಎಂಬ ಪೋಷಕಾಂಶಕ್ಕೆ ರಕ್ತವನ್ನು ಹೆಪ್ಪುಗಟ್ಟಿಸುವುದನ್ನು ತಡೆಯುವ ಗುಣವಿರುವ ಕಾರಣ ರಕ್ತ ತೆಳುವಾಗಿರಲು ಹಾಗೂ ರಕ್ತನಾಳಗಳಲ್ಲಿ ಸರಾಗವಾಗಿ ಸಂಚರಿಸಲು ನೆರವಾಗುವ ಮೂಲಕ ಹೃದಯದ ಮೇಲಿನ ಒತ್ತಡವನ್ನು ಕಡಿಮೆ ಮಾಡಿ ಈ ಮೂಲಕ ಬರಬಹುದಾಗಿದ್ದ ಕೆಲವಾರು ಕಾಯಿಲೆಗಳಿಂದ ರಕ್ಷಿಸುತ್ತದೆ.

ಹೊಟ್ಟೆಯ ಹುಣ್ಣುಗಳನ್ನು ಗುಣಪಡಿಸುತ್ತದೆ..
ಇದರಲ್ಲಿರುವ ವಿಟಮಿನ್ ಸಿ ಹೊಟ್ಟೆಯ ಹುಣ್ಣುಗಳನ್ನು ಗುಣಪಡಿಸಲು ನೆರವಾಗುತ್ತದೆ. ಅಲ್ಲದೇ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ನೀರಿನಂಶ ಹೊಟ್ಟೆಯ ಒಳಪದರದ ಆಮ್ಲೀಯತೆಯನ್ನು ಕಡಿಮೆಗೊಳಿಸಿ ಹೊಟ್ಟೆಯ ಉರಿಯನ್ನು ಇಲ್ಲವಾಗಿಸುತ್ತದೆ. ಮಲಬದ್ಧತೆ ಯಿಂದ ರಕ್ಷಿಸುತ್ತದೆ ಇದರಲ್ಲಿ ನೀರು ಮತ್ತು ಕರಗುವ ನಾರು ಅತ್ಯಂತ ಸಂತುಲಿತ ಅನುಪಾತದಲ್ಲಿವೆ. ನೆರವಾಗುತ್ತದೆ. ಈ ಹಣ್ಣಿನ ಸೇವನೆಯಿಂದ ಶ್ವಾಸಕೋಶಗಳಿಗೆ ಹೆಚ್ಚಿನ ಪೋಷಣೆ ದೊರಕುತ್ತದೆ ಹಾಗೂ ದೇಹಕ್ಕೆ ಅಭ್ಯಾಸವಾಗಿ ಹೋಗಿರುವ ನಿಕೋಟಿನ್ ನ ಪ್ರಭಾವದಿಂದ ಶೀಘ್ರವಾಗಿ ಹೊರಬರಲೂ ನೆರವಾಗುತ್ತದೆ. ಒತ್ತಡದಿಂದ ರಕ್ಷಿಸುತ್ತದೆ ಒಂದು ವೇಳೆ ನಿಮಗೆ ಮಾನಸಿಕ ಒತ್ತಡ ವಿದ್ದರೆ ಇದಕ್ಕೆ ಮಾತ್ರೆಗಳನ್ನು ನುಂಗದೇ ಕೇಸರಿ ಕರಬೂಜವನ್ನು ನಿಮ್ಮ ಆಹಾರದೊಡನೆ ಸೇವಿಸಿ. ಇದರಿಂದ ಮೆದುಳಿಗೆ ಹೆಚ್ಚಿನ ಆಮ್ಲಜನಕ ದೊರಕುತ್ತದೆ ಹಾಗೂ ತನ್ಮೂಲಕ ಮೆದುಳಿನ ಒತ್ತಡವನ್ನು ನಿವಾರಿಸಿ ನಿರಾಳವಾಗಿರಲು ನೆರವಾಗುತ್ತದೆ.

ಹಲ್ಲು ನೋವಿನಿಂದ ರಕ್ಷಿಸುತ್ತದೆ..
ಈ ಹಣ್ಣಿನ ಸಿಪ್ಪೆಯಲ್ಲಿ ಹಲ್ಲುನೋವನ್ನು ಗುಣಪಡಿಸಲು ಸಮರ್ಥವಾದ ಪೋಷಕಾಂಶಗಳಿವೆ. ಹಲ್ಲು ನೋವಿದ್ದಾಗ ಈ ಸಿಪ್ಪೆಗಳನ್ನು ಚೆನ್ನಾಗಿ ನೀರಿನಲ್ಲಿ ಕುದಿಸಿ ತಣಿಸಿ ಸೋಸಿ ಸಂಗ್ರಹಿಸಿದ ನೀರಿನಿಂದ ಬಾಯಿಯನ್ನು ಮುಕ್ಕಳಿಸಿಕೊಳ್ಳಬೇಕು.

Comments are closed.