ಆರೋಗ್ಯ

ಹೋಂ ಕ್ವಾರಂಟೈನ್ ಉಲ್ಲಂಘಿಸಿದರೇ ಅವರಿಂದಲೇ ಎಲ್ಲಾ ಖರ್ಚು ವಸೂಲಿ: ಡಿಸಿ ಜಿ. ಜಗದೀಶ್

Pinterest LinkedIn Tumblr

ಉಡುಪಿ: ಉಡುಪಿಯ ಕಾಪು ಮೂಲದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ವಿಚಾರದಲ್ಲಿ ಹೋಮ್ ಕ್ವಾರಂಟೈನ್ ಉಲ್ಲಂಘಿಸಿದ್ದಕ್ಕಾಗಿ ಆತನ ಸಂಪರ್ಕಕ್ಕೆ ಬಂದ ಎಲ್ಲ ರೋಗಿಗಳ ವೆಚ್ಚ ಆತನೇ ಭರಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಹೇಳಿದ್ದಾರೆ.

ಅವರು ಗುರುವಾರ ಉಡುಪಿ ಪ್ರೆಸ್ ಕ್ಲಬ್ಬಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ವಿದೇಶದಿಂದ ಬಂದು ಹೋಮ್ ಕ್ವಾರಂಟೈನ್ ಆದೇಶವನ್ನು ಉಲ್ಲಂಘಿಸಿದ್ದು, ಮನೆಯಲ್ಲಿ ಇರಬೇಕಾದ ವ್ಯಕ್ತಿ ಎಲ್ಲರ ಜೊತೆಯಲ್ಲಿ ಸೇರಿ ಕ್ರಿಕೆಟ್ ಆಡಿದ್ದಲ್ಲದೆ ಆತ ನಿಯಮ ಉಲ್ಲಂಘನೆ ಮಾಡಿ ಎಲ್ಲ ಕಡೆ ಓಡಾಡಿದ್ದಾನೆ ಆದ್ದರಿಂದ ಅವನ ಸಂಪರ್ಕಕ್ಕೆ ಬಂದ ಎಲ್ಲಾ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಬೇಕಾಗಿದೆ ಅದಕ್ಕೆ ತಗಲುವ ಎಲ್ಲಾ ವೆಚ್ಚವನ್ನು ಆತನಿಂದನೆ ವಸೂಲಿ ಮಾಡಲಾಗುವುದು ಎಂದರು.

ಅಲ್ಲದೆ ಅಂತಹ ವ್ಯಕ್ತಿಗಳ ಮೇಲೆ ಆ ವ್ಯಕ್ತಿಯ ಮೇಲೆ ಕ್ರಿಮಿನಲ್ ಕೇಸು ದಾಖಲಿಸುತ್ತೇವೆ ಉದ್ಧಟತನ ತೋರಿದ ಎಲ್ಲಾ ಪೇಷಂಟ್ ಪಾರ್ಟಿಯಿಂದ ವೆಚ್ಚವನ್ನು ವಸೂಲಿ ಮಾಡುತ್ತೇವೆ’ ಕಾನೂನು ಉಲ್ಲಂಘಿಸಿದವರಿಗೆ ಎರಡು ವರ್ಷ ಜೈಲುವಾಸ ವಿಧಿಸುವ ಅವಕಾಶ ಇದೆ ಉಡುಪಿ ಜಿಲ್ಲೆಯಲ್ಲಿ ಈವರೆಗೆ ಎಂಟು ಮಂದಿಯ ಮೇಲೆ ಪ್ರಕರಣ ದಾಖಲಿಸಿದ್ದೇವೆ ಎಂದರು.

Comments are closed.