ಆರೋಗ್ಯ

ನಾಳೆ(ಮೇ.13)ಯಿಂದ ಉಡುಪಿ ಜಿಲ್ಲೆಯಲ್ಲಿ KSRTC, ಖಾಸಗಿ ಬಸ್ಸುಗಳ ಓಡಾಟ

Pinterest LinkedIn Tumblr

ಉಡುಪಿ: ಹಸುರು ವಲಯದಲ್ಲಿ ಬಸ್‌ಗಳ ಓಡಾಟಕ್ಕೆ ಸರಕಾರ ಈಗಾಗಲೇ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ನಾಳೆ ಅಂದರೆ ಮೇ.13 ರಿಂದ ಕೆಎಸ್ಸಾರ್ಟಿಸಿ ಹಾಗೂ ಖಾಸಗಿ ಬಸ್ಸು ಓಡಾಡಲಿದೆ ಎಂದು ಉಡುಪಿ ಡಿಸಿ ಜಿ. ಜಗದೀಶ್ ಹೇಳಿದ್ದಾರೆ.

ಸಾರ್ವಜನಿಕರು ಮತ್ತು ಪ್ರಯಾಣಿಕರ ಬೇಡಿಕೆ ಹಿನ್ನೆಲೆ ಈ ಕ್ರಮಕೈಗೊಳ್ಳಲಾಗಿದ್ದು ಬಸ್ಸಿಗೆ ಸಂಬಂಧಿಸಿದವರು ಬಸ್‌ಗಳಲ್ಲಿ ಶೇ. 50ರಷ್ಟು ಮಾತ್ರ ಪ್ರಯಾಣಿಕರಿಗೆ ಸಂಚಾರ ಅವಕಾಶ ನೀಡಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು. ಅಲ್ಲದೆ ಪ್ರಯಾಣಿಕರು ಕೂಡ ಮಾಸ್ಕ್ ಮೊದಲಾದ ಅಗತ್ಯ ಮುನ್ನೆಚ್ಚರಿಕಾ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಕಾನೂನು‌ಕ್ರಮ ಜರುಗಿಸಲಾಗುತ್ತದೆ ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ.

ಒಟ್ಟಿನಲ್ಲಿ ಲಾಕ್ ಡೌನ್ ದಿನದಿಂದಲೂ ಸ್ಥಗಿತಗೊಂಡಿದ್ದ ಬಸ್ಸು ಸಂಚಾರ ಆರಂಭಗೊಳ್ಳುತ್ತಿದ್ದು ಸಾರ್ವಜನಿಕರು ಸರಕಾರದ ಆದೇಶ ಪಾಲನೆ ಮಾಡಬೇಕಿದೆ‌. ಬಸ್ ಮಾಲಕರು ಸೇರಿದಂತೆ ಸಿಬ್ಬಂದಿಗಳು ಪ್ರಯಾಣಿಕರ ಹಿತರಕ್ಷಣೆ ಕಾಯುವ ಕಾರ್ಯಾಡಬೇಕಿದೆ.

(ವರದಿ- ಯೋಗೀಶ್ ಕುಂಭಾಸಿ)

Comments are closed.