ಆರೋಗ್ಯ

ಉಡುಪಿಗೆ ಕೊರೋನಾ ಆಘಾತ: ದುಬೈನಿಂದ ಬಂದ ಐದು ಮಂದಿಗೆ ಕೋವಿಡ್ ಸೋಂಕು ದೃಢ

Pinterest LinkedIn Tumblr

ಉಡುಪಿ: ತಿಂಗಳುಗಳಿಂದ ಕೋವಿಡ್-19 ಸೋಂಕು ಪ್ರಕರಣವಿಲ್ಲದೆ ನಿರಾತಂಕದಲ್ಲಿದ್ದ ಉಡುಪಿ ಜಿಲ್ಲೆಗೆ ಇಂದು ಕೋವಿಡ್ ಆಘಾತ ಹೆಚ್ಚಿದೆ. ಶುಕ್ರವಾರ ಒಂದೇ ದಿನ ಐದು ಜನರಿಗೆ ಸೋಂಕು ದೃಢವಾಗಿದೆ.

ದುಬೈನಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ಪೈಕಿ ಉಡುಪಿ ಜಿಲ್ಲೆಯ ಐದು ಮಂದಿಯಲ್ಲಿ ಕೋವಿಡ್-19 ಸೋಂಕು ದೃಡಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಸುಧೀರ್‌ ಚಂದ್ರ ಸೂಡ ತಿಳಿಸಿದ್ದಾರೆ. ಇದರಲ್ಲಿ ಐವರಿಗೆ ಸೋಂಕು ದೃಢವಾಗಿದ್ದು, ಮತ್ತೊಬ್ಬರ ವರದಿಯಲ್ಲಿ ಇನ್ನೂ ಗೊಂದಲಗಳಿವೆ ಎನ್ನಲಾಗಿದೆ.

ಕೋವಿಡ್-19 ಕಾರಣಕ್ಕಾಗಿ ವಿದೇಶಗಳಲ್ಲಿ ಸಿಲುಕಿಕೊಂಡಿರುವ ಅನಿವಾಸಿ ಭಾರತೀಯರನ್ನು ಮರಳಿ ಭಾರತಕ್ಕೆ ತರುವ ಕಾರ್ಯಾಚರಣೆಯಡಿ 176 ಮಂದಿ ಮಂಗಳವಾರ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಾಣದಲ್ಲಿ ಬಂದಿಳಿದಿದ್ದರು.ಈ ಪೈಕಿ ಉಡುಪಿ ಜಿಲ್ಲೆಗೆ ಸೇರಿದ 49 ಮಂದಿಯನ್ನು ಜಿಲ್ಲೆಯ ಹೊಟೇಲ್‌ ನಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಇವರ ಗಂಟಲದ್ರವವನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು.

ಸದ್ಯ ಐದು ಮಂದಿಯನ್ನು ಅವರು ಉಳಿದುಕೊಂಡಿರುವ ಹೊಟೇಲ್‌ನಿಂದ ಉಡುಪಿಯ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗುತ್ತದೆ.

Comments are closed.