ಆರೋಗ್ಯ

ಶೀತ, ಕೆಮ್ಮು, ಜ್ವರದಿಂದ ಬಳಲುತ್ತಿದ್ದ ಉಡುಪಿ ಬನ್ನಂಜೆಯ ವ್ಯಕ್ತಿ ಸಾವು: ಗಂಟಲು ದ್ರವ ಪರೀಕ್ಷೆಗೆ ರವಾನೆ

Pinterest LinkedIn Tumblr

ಉಡುಪಿ: ಇಲ್ಲಿನ ಬನ್ನಂಜೆಯ ನಿವಾಸಿಯೊಬ್ಬರು ಕಳೆದ ಮೂರು ದಿನಗಳಿಂದ ಶೀತ, ಕೆಮ್ಮು ಜ್ವರದಿಂದ ಬಳಲುತ್ತಿದ್ದು ಆ ವ್ಯಕ್ತಿ ಭಾನುವಾರ ಬೆಳಿಗ್ಗೆ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದು ವ್ಯಕ್ತಿಯ ಗಂಟಲ ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ.

ನಗರದ ಬನ್ನಂಜೆ ವಾರ್ಡ್‌ನ 44 ವರ್ಷದ ವ್ಯಕ್ತಿ ಕಳೆದ ಮೂರು ದಿನದಿಂದ ಶೀತ, ಕೆಮ್ಮು ಜ್ವರದಿಂದ ಬಳಲುತ್ತಿದ್ದರು, ಇಂದು ಸಂಂಬಂಧಿಕರು ಜಿಲ್ಲಾಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ. ವ್ಯಕ್ತಿಯ ಸಾವಿನಲ್ಲಿ ಸಂಶಯಾಸ್ಪದ ಹಿನ್ನೆಲೆಯಲ್ಲಿ ಗಂಟಲ ದ್ರವ ಪರೀಕ್ಷೆಗೆ ಕಳುಹಿಸಲಾಗಿದೆಂದು ಆರೋಗ್ಯಧಿಕಾರಿ ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ಮೃತ ವ್ಯಕ್ತಿಯಲ್ಲಿ ಕೋವಿಡ್ ಲಕ್ಷಣ ಇದ್ದ ಕಾರಣ ವರದಿಗಾಗಿ ಕಾಯುತ್ತಿರುವುದಾಗಿ ಆರೋಗ್ಯಧಿಕಾರಿ ತಿಳಿಸಿದ್ದಾರೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಂತೆ ಕಾಣುತ್ತದೆ ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಟೆಸ್ಟ್ ಮಾಡಿಸುತ್ತಿದ್ದೇವೆ ಡಿಎಚ್‌ಒ ಮಾಹಿತಿ ನೀಡಿದ್ದಾರೆ.

ಇನ್ನು ಇಂದಿನ ಕೊರೋನಾ ಬುಲೆಟಿನ್ ವರದಿಯಲ್ಲಿ ಉಡುಪಿ ಜಿಲ್ಲೆಗೆ ಯಾವುದೇ ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ.

Comments are closed.