ಕುಂದಾಪುರ: ಕೊರೋನಾ ಸಂದರ್ಭ ಫ್ರಂಟ್ಲೈನ್ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸಿದ ಸರ್ಕಾರಿ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು ನಡೆಯಿತು.
ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ. ಪ್ರಥಮವಾಗು ಕೋವಿಡ್ ಲಸಿಕೆ ಪಡೆದರು. ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ., ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕೇಶವ ಶೆಟ್ಟಿಗಾರ್, ಕುಂದಾಪುರ ನಗರ ಠಾಣೆ ಪಿಎಸ್ಐ ಸದಾಶಿವ ಗವರೋಜಿ ಮತ್ತಿತರರು ಕೋವಿಡ್ ಲಸಿಕೆ ಪಡೆದರು.
ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ರೊಬರ್ಟ್ ರೆಬೆಲ್ಲೊ, ಜಿಲ್ಲಾ ಕೋವಿಡ್ ವಿಶೇಷ ಅಧಿಕಾರಿ ಡಾ. ಪ್ರೇಮಾನಂದ, ತಾಲೂಕು ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ, ಫಿಜಿಶಿಯನ್ ಡಾ. ನಾಗೇಶ್, ಶುಶ್ರೂಷಕ ಅಧೀಕ್ಷಕಿ ಅನ್ನಪೂರ್ಣ ಹಾಗೂ ಸಿಬ್ಬಂದಿಗಳಿದ್ದರು.
(ವರದಿ- ಯೋಗೀಶ್ ಕುಂಭಾಸಿ)
Comments are closed.