ಆರೋಗ್ಯ

ಸಂಸದ ಅನಂತ ಕುಮಾರ್ ಹೆಗಡೆ ಆಸ್ಪತ್ರೆಗೆ ದಾಖಲು

Pinterest LinkedIn Tumblr

ಶಿರಸಿ: ಕೇಂದ್ರ ಮಾಜಿ ಸಚಿವ, ಸಂಸದ ಅನಂತ ಕುಮಾರ್‌ ಹೆಗಡೆ ಅವರ ಕಾಲಿಗೆ ಶಸ್ತ್ರ ಚಿಕಿತ್ಸೆ ನಡೆದಿದ್ದು ಸದ್ಯ ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ.

ಚಿಕಿತ್ಸೆ ಬಳಿಕ ಕೆಲ ಸಮಯ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ ಹಿನ್ನೆಲೆ ಕೆಲ ಕಾಲ ಅನಂತ್ ಕುಮಾರ್ ಹೆಗಡೆ ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಸಾರ್ವಜನಿಕರ ಭೇಟಿಗೆ ಸಿಗುವುದಿಲ್ಲ ಎಂದು ಅವರ ಆಪ್ತ ಕಾರ್ಯದರ್ಶಿ ಸುರೇಶ್‌ ಶೆಟ್ಟಿತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ಅನಂತ ಕುಮಾರ್‌ ಹೆಗಡೆ ಅವರಿಗೆ ಕಳೆದ ಹಲವು ವರ್ಷಗಳಿಂದ ತೀವ್ರ ತರವಾದ ಬೆನ್ನು ನೋವು ಮತ್ತು ಕಾಲು ನೋವು ಕಾಡುತ್ತಿತ್ತು. ಇತ್ತೀಚೆಗೆ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಿಸಿದ ವೈದ್ಯರು ತಕ್ಷಣವೇ ಕಾಲಿಗೆ ಸೂಕ್ತ ಶಸ್ತ್ರ ಚಿಕಿತ್ಸೆ ನಡೆಸುವಂತೆ ಸೂಚಿಸಿದ್ದರು. ಕೆಲ ದಿನಗಳ ಹಿಂದೆ ಮಂಗಳೂರಿನಲ್ಲಿ ಈ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

Comments are closed.