ಆರೋಗ್ಯ

ಕೋವಿಡ್ ಸುರಕ್ಷಾ ನಿಯಮ ಉಲ್ಲಂಘನೆ ದಂಡ ಪ್ರಕರಣ ಹೆಚ್ಚಿಸಲು ಡಿಸಿ ಜಿ.ಜಗದೀಶ್ ಸೂಚನೆ

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿಕೋವಿಡ್ಎರಡನೇಅಲೆಯು ಪ್ರಾರಂಭವಾಗುತ್ತಿದ್ದು, ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಸಹ ಸಾರ್ವಜನಿಕರುಕೋವಿಡ್ ಸುರಕ್ಷತಾ ಕ್ರಮಗಳಾದ ಮಾಸ್ಕ್ಧರಿಸದಿರುವುದು, ಸಾಮಾಜಿಕಅಂತರಪಾಲನೆ ಮಾಡದೇಇರುವುದುಕಂಡು ಬರುತ್ತಿದ್ದು,ನಿಯಮಉಲ್ಲಂಘಿಸುವವರ ವಿರುದ್ಧದಂಡ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಜಿ.ಜಗದೀಶ್ ಸೂಚನೆ ನೀಡಿದ್ದಾರೆ.

ಅವರು ಮಂಗಳವಾರ, ಜಿಲ್ಲೆಯಎಲ್ಲಾ ತಹಸೀಲ್ದಾರ್ಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಉಡುಪಿ ನಗರಸಭೆಯ ಪೌರಾಯುಕ್ತರು,ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಝೂಮ್ ಮೀಟಿಂಗ್ ಮೂಲಕ ಸಭೆ ನಡೆಸಿ, ತಮ್ಮ ವ್ಯಾಪ್ತಿಯಲ್ಲಿ ಸುರಕ್ಷಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧದಂಡ ವಿಧಿಸುವ ಪ್ರಕರಣಗಳನ್ನು ಹೆಚ್ಚು ಮಾಡುವಂತೆ ಸೂಚನೆ ನೀಡಿದರು.

ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಿರುವಂತೆ, ಸಾಮಾಜಿಕ ಪಾಲನೆ ಕುರಿತಂತೆ ವಿವಿಧ ಮಾಲ್ಗಳು, ಹಾಲ್ಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಯುವ ಸಮಾರಂಭಗಳಲ್ಲಿ ನಿಗಧಿಪಡಿಸಿರುವ ಸಂಖ್ಯೆಗಿಂತ ಹೆಚ್ಚಿನ ಸಾರ್ವಜನಿಕರು ಸೇರಿದ್ದರೆ ಸಂಬಂಧಪಟ್ಟವರ ವಿರುದ್ಧ ಸುತ್ತೋಲೆಯಂತೆ ಸೂಕ್ತ ಕ್ರಮ ಕೈಗೊಳ್ಳಿ.ಸುರಕ್ಷಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ದದಂಢ ವಿಧಿಸುವಅಧಿಕಾರವನ್ನು ವಿವಿಧ ಅಧಿಕಾರಿಗಳಿಗೆ ಈಗಾಗಲೇ ಪ್ರತ್ಯಾಯೋಜಿಸಿದ್ದು, ಅದರಂತೆಕ್ರಮ ಕೈಗೊಳ್ಳಿ, ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧಕ್ರಮ ಕೈಗೊಳ್ಳಲಾಗುವುದು ಎಂದುಜಿ.ಜಗದೀಶ್ ಎಚ್ಚರಿಸಿದರು.
ಕೋವಿಡ್ಎರಡನೇಅಲೆಯ ನಿಯಂತ್ರಣಕ್ಕೆಕೋವಿಡ್ ಸುರಕ್ಷಾ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಅತ್ಯಗತ್ಯವಾಗಿದ್ದು, ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧದಂಡ ವಿಧಿಸುವ ಪ್ರಕರಣಗಳನ್ನು ದಾಖಲಿಸಲು ಈಗಾಗಲೇ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಸಾರ್ವಜನಿಕರುಎಲ್ಲಾ ಸುರಕ್ಷಾ ನಿಯಮಗಳನ್ನು ತಪ್ಪದೇ ಪಾಲಿಸುವುದರ ಮೂಲಕ ಜಿಲ್ಲೆಯನ್ನುಕೋವಿಡ್ 2 ನೇ ಅಲೆಯಿಂದರಕ್ಷಿಸಲು ಸಹಕರಿಸುವಂತೆಜಿಲ್ಲಾಧಿಕಾರಿಜಿ.ಜಗದೀಶ್ ತಿಳಿಸಿದ್ದಾರೆ.

ಅಪರಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರಾಭಿವೃಧ್ದಿಕೋಶದಯೋಜನಾ ನಿರ್ದೇಶಕಅರುಣಪ್ರಭಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

Comments are closed.