ಬೆಂಗಳೂರು: ಕೋವಿಡ್-19 ಪಾಸಿಟಿವ್ ಆಗಿ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಡಿಸ್ಚಾರ್ಜ್ ಆಗಿದ್ದಾರೆ.

ಎ.16ರಂದು ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಬೆಳಗಾವಿ ಉಪ ಚುನಾವಣೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿದ್ದ ಸಿಎಂ ಯಡಿಯೂರಪ್ಪ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ಎ.16ರಂದು ರಾಮಯ್ಯ ಆಸ್ಪತ್ರೆಗೆ ಚೆಕಪ್ ಗೆ ಹೋಗಿದ್ದರು. ನಂತರ ಅವರಿಗೆ ಕೋವಿಡ್ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ನಡುವೆಯೂ ಕೊರೋನಾ ನಿಯಂತ್ರಣ ವರ್ಚುವಲ್ ಸಭೆ ನಡೆಸಿ ಅಧಿಕಾರಿಗಳು ಹಾಗೂ ಸಂಪುಟ ಸಹೋದ್ಯೋಗಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದ್ದರು.
Comments are closed.