ಬೆಂಗಳೂರು: ಮೇ 12 ರ ವರೆಗೆ ಜನತಾ ಕರ್ಫ್ಯೂ ಇರಲಿದ್ದು, ಲಾಕ್ ಡೌನ್ ಮುಂದುವರೆಸುವ ಯೋಚನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದು ಸಿಎಂ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ಇದೇ ವೇಳೆ ಚಾಮರಾಜನಗರ ಆಕ್ಸಿಜನ್ ಘಟನೆ ಕುರಿತು ವಿಷಾದ ವ್ಯಕ್ತಪಡಿಸಿದರು.
ಮೇ.4 ಮಂಗಳವಾರ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್ ಇಲ್ಲ ಎಂದಿದ್ದಾರೆ. ಆಯಾಯ ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯ ಕ್ಷೇತ್ರಕ್ಕೆ ತೆರಳಿ ಸಂಪೂರ್ಣ ಜವಬ್ದಾರಿ ತೆಗದುಕೊಳ್ಳಬೇಕು. ತಕ್ಷಣ ತಮ್ಮ ತಮ್ಮ ಜಿಲ್ಲೆಗೆ ತೆರಳಲು ಸಿಎಂ ಸೂಚಿಸಿದ್ದಾರೆ.
ಇನ್ನು ಪತ್ರಕರ್ತರು ಕೂಡ ಫ್ರಂಟ್ ಲೈನ್ ವಾರಿಯರ್ಸ್ ಎಂದು ಘೋಷಿಸಿದ ಸಿಎಂ ಪತ್ರಕರ್ತರಿಗೂ ಕೊರೋನಾ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗುತ್ತೆ ಎಂದರು.
Comments are closed.