ಆರೋಗ್ಯ

ರಸ್ತೆ ಬದಿ ತ್ಯಾಜ್ಯ ಎಸೆಯುವ ವಾಹನ ಸೀಜ್ ಮಾಡಿ ಕೊರೋನಾ ಮುಗಿಯುವರೆಗೆ ಕಸ ಸಾಗಾಣಿಕೆಗೆ ಬಳಕೆ- ಉಡುಪಿ ಡಿಸಿ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲಾದ್ಯಂತ ರಾಷ್ಟ್ರೀಯ ಹೆದ್ದಾರಿ, ಪ್ರಮುಖ ರಸ್ತೆಯ ಬದಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ‌ ತ್ಯಾಜ್ಯ ಎಸೆಯುವರ ವಿರುದ್ಧ ಉಡುಪಿ ಜಿಲ್ಲಾಧಿಕಾರಿ ವಿಶಿಷ್ಟ ಕ್ರಮಕ್ಕೆ ಮುಂದಾಗಿದ್ದಾರೆ.

ಸಾರ್ವಜನಿಕರು ಕೆಲ ಹೋಟೆಲ್ ಹಾಗೂ ಅಂಗಡಿಯವರು ಕಸ/ಕಡ್ಡಿ ತ್ಯಾಜ್ಯ ಎಸೆಯುತ್ತಿದ್ದು ಇದನ್ನು ತಡೆಗಟ್ಟಲು ಹಾಗೂ ಕಸವನ್ನು ಎಸೆಯುವರ ವಿರುದ್ದ ಕ್ರಮವಹಿಸಲು ಸ್ಥಳೀಯ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ.

ಪ್ರಸ್ತುತ ಕೊರೋನಾ ಸೋಂಕು‌ ಜಿಲ್ಲೆಯಲ್ಲಿ ಹರಡುತ್ತಿದ್ದು ಈ ಸಮಯದಲ್ಲೂ ಸಾರ್ವಜನಿಕರು ವಾಹನದಲ್ಲಿ ಬಂದು ಕಸವನ್ನು ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಬದಿಗಳಲ್ಲಿ ಎಸೆಯುತ್ತಿರುವುದು ಗಮನಕ್ಕೆ ಬಂದಿದ್ದು ತ್ಯಾಜ್ಯ ವಸ್ತುಗಳನ್ನು ಎಸೆಯುವ ವಾಹನ ಜಪ್ತಿ (ಸೀಜ್) ಮಾಡಿ ಆ ವಾಹನಗಳನ್ನು ಕೋವಿಡ್ ಸಾಂಕ್ರಾಮಿಕ ರೋಗ ಮುಗಿಯುವ ತನಕ ಕಸ ಸಾಗಾಣಿಕೆಗೆ ಬಳಸಲು ಕ್ರಮ ವಹಿಸಲಾಗುವುದು ಎಂದು ಉಡುಪಿ‌ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

Comments are closed.