ಆರೋಗ್ಯ

ಲಾಕ್ಡೌನ್ ಚಿಂತನೆ ಸರ್ಕಾರದ ಮುಂದಿಲ್ಲ, ಸುಳ್ಳು ಸುದ್ದಿಯಿಂದ ಜನರು ಆತಂಕಗೊಳ್ಳುವುದು ಬೇಡ: ಡಾ. ಕೆ. ಸುಧಾಕರ್

Pinterest LinkedIn Tumblr

ಬೆಂಗಳೂರು: ಕೋವಿಡ್ ಮೊದಲನೇ, ಎರಡನೇ ಅಲೆಯಲ್ಲಿ ಅನಾರೋಗ್ಯ ಸಮಸ್ಯೆಯಿಂದ ಹಾಗೂ ಲಾಕ್ ಡೌನ್ ನಿಂದ ಆರ್ಥಿಕವಾಗಿ ಜನರು ಬಹಳಷ್ಟು ನೊಂದಿದ್ದು ಮಾತ್ರವಲ್ಲದೆ ನಷ್ಟ ಅನುಭವಿಸಿದ್ದಾರೆ. ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ, ಹೀಗಾಗಿ ಮತ್ತೆ ಆತಂಕ, ಸಮಸ್ಯೆ ಸೃಷ್ಟಿ ಮಾಡುವ ಕೆಲಸ ಮಾಡುವುದಿಲ್ಲ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಲಾಕ್ ಡೌನ್ ಹೇರುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಲಾಕ್ ಡೌನ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳುಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ವೇಗವಾಗಿ ಹಬ್ಬುತ್ತಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಜವಾಬ್ದಾರಿಯುತವಾಗಿ ವರ್ತಿಸಿ ಲಾಕ್ ಡೌನ್ ನ ಸುಳ್ಳುಸುದ್ದಿ ಹಬ್ಬಿಸಿ ಜನರಲ್ಲಿ ಭಯ, ಆತಂಕ ಸೃಷ್ಟಿಸುವುದು ಬೇಡ, ಗೊಂದಲಮಯ ಸುದ್ದಿ ಹಾಕುವುದು ಬೇಡ ಎಂದರು.

ಕೊರೋನಾ ರೂಪಾಂತರಿ ಹೊಸ ತಳಿ ಬರುತ್ತಿದೆ, ಇದು ಬಹಳ ವೇಗವಾಗಿ ಸಮುದಾಯದಲ್ಲಿ ಹರಡುವ ಸಾಧ್ಯತೆಯಿದೆ ಎಂದು ಮಾಧ್ಯಮಗಳಲ್ಲಿ ಸರಿಯಾದ ಎಚ್ಚರಿಕೆ ಸುದ್ದಿ ನೀಡುತ್ತಿದ್ದು ಅದು ಮುಂದುವರಿಯಲಿ. ಆದರೆ ಲಾಕ್ ಡೌನ್ ನಂತಹ ಆತಂಕಗೊಳಿಸುವ ಸುದ್ದಿ ಬೇಡ ಎಂದು ಮನವಿ ಮಾಡಿಕೊಂಡರು.

Comments are closed.