ಆರೋಗ್ಯ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ: ವಿಶ್ವ ಆಹಾರ ಸುರಕ್ಷತಾ ದಿನದ ಆಚರಣೆ

Pinterest LinkedIn Tumblr

ಬ್ರಹ್ಮಾವರ: ಕಲುಷಿತ ಆಹಾರ ಸೇವನೆಯಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟಲು ಮತ್ತು ಆಹಾರದ ಸುರಕ್ಷತೆಯ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸಲು ಆಹಾರ ಸುರಕ್ಷತಾ ದಿನವನ್ನು ಜೂ.7 ರಂದು ಬ್ರಹ್ಮಾವರದ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಆಹಾರ ತಂತ್ರಜ್ಞಾನ ವಿಭಾಗದಿಂದ ಆಚರಿಸಲಾಯಿತು.

ವಿಶ್ವ ಆಹಾರ ಸುರಕ್ಷತಾ ದಿನವಾಗಿ
ವಿಶ್ವ ಆರೋಗ್ಯ ಸಂಸ್ಥೆಯು ಆಚರಿಸುತ್ತದೆ. ಇದರ ಮುಖ್ಯ ಉದ್ದೇಶ ಆಹಾರ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವುದಾಗಿದೆ. ಆಹಾರ ತಂತ್ರಜ್ಞಾನ ವಿಭಾಗದ ವತಿಯಿಂದ ವಿದ್ಯಾರ್ಥಿಗಳಲ್ಲಿ ಆಹಾರದ ಸುರಕ್ಷತೆ ಕುರಿತು ಅರಿವು ಮೂಡಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಣೆಯನ್ನು ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಡಾ. ಸೀಮಾ ಜಿ. ಭಟ್ ವಿದ್ಯಾರ್ಥಿ ಆಹಾರ ಜಾಗೃತಿಯ ಕುರಿತು ಮಾತನಾಡಿದರು. ಆಹಾರ ತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ಹೀನಾ ಕೌಸರ್ ಆಹಾರ ಸುರಕ್ಷತೆಯ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಆಹಾರ ತಂತ್ರಜ್ಞಾನ ವಿಭಾಗದ ಉಪನ್ಯಾಸಕಿಯರಾದ ವಿನಂತಿ ಮತ್ತು ಲಕ್ಷ್ಮೀ ಹಾಗೂ ಎಲ್ಲಾ ಆಹಾರ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಆಹಾರ ತಂತ್ರಜ್ಞಾನದ ವಿದ್ಯಾರ್ಥಿ ದೀಪಿಕಾ ನಿರೂಪಿಸಿ, ಪ್ರಾಂಜಲಿ ಸ್ವಾಗತಿಸಿ, ವಿದ್ಯಾರ್ಥಿನಿ ಚಿನ್ಮಯಿ ವಂದಿಸಿದರು.

Comments are closed.