Mumbai

ಕನ್ನಡ ಧ್ವಜ ಸುಟ್ಟ ಕಿಡಿಗೇಡಿಗಳ ಕೃತ್ಯದ ವಿರುದ್ಧ ಸ್ಯಾಂಡಲ್​ವುಡ್​ ಗರಂ..!

Pinterest LinkedIn Tumblr

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕರ್ನಾಟಕದ ಧ್ವಜ ಸುಟ್ಟು ಹಾಕಿದ ಘಟನೆ ನಡೆದಿದೆ. ಅದನ್ನು ನಟ ಶಿವರಾಜ್​ಕುಮಾರ್​ ಸಹಿತ ಕನ್ನಡ ಚಿತ್ರರಂಗದ ಹಲವರು ಖಂಡಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಶಿವರಾಜಕುಮಾರ್ ಅವರು, ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ ಎಂದು ಆಗ್ರಹಿಸಿದ್ದಾರೆ. ನಟರಾದ ಉಪೇಂದ್ರ, ಜಗ್ಗೇಶ್​,  ಸೇರಿದಂತೆ ಕನ್ನಡದ ಅನೇಕ ಸೆಲೆಬ್ರಿಟಿಗಳು ಕೂಡ ಈ ಘಟನೆಯನ್ನು ಖಂಡಿಸಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಹಲವರು ಆಕ್ರೋಶ ವ್ಯಕ್ತಪಡಿಸುತ್ತಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಟ್ಯಾಗ್​ ಮಾಡಿ ಟ್ವೀಟ್​ ಮಾಡಿದ್ದಾರೆ.

ಶಿವರಾಜ್​ಕುಮಾರ್​ ಖಂಡನೆ…..
ಕನ್ನಡ ಭಾಷೆ, ನೆಲೆ, ಜಲದ ವಿಷಯ ಬಂದಾಗ ಡಾ. ರಾಜ್​ಕುಮಾರ್​ ಕುಟುಂಬ ಸದಾ ಮುಂದಿರುತ್ತದೆ. ಗೋಕಾಕ್​ ಚಳುವಳಿ ಕಾಲದಿಂದಲೂ ಈ ಮಾತು ಸಾಬೀತಾಗಿದೆ. ಈಗ ಕರುನಾಡಿದ ಧ್ವಜ ಸುಟ್ಟು ಹಾಕಿದ ಕಿಡಿಗೇಡಿಗಳ ವಿರುದ್ಧ ಶಿವಣ್ಣ ಗರಂ ಆಗಿದ್ದಾರೆ. ‘ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ’ ಎಂದು ಶಿವಣ್ಣ ಟ್ವೀಟ್​ ಮಾಡಿದ್ದಾರೆ.

ಕರುನಾಡಿನ ಧ್ವಜ ಸುಟ್ಟ ಘಟನೆಯನ್ನು ನಟ ಜಗ್ಗೇಶ್​ ಖಂಡಿಸಿದ್ದು ‘ಕನ್ನಡ ಬಾವುಟ ಅಪಮಾನಿಸಿದವರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ. ಕನ್ನಡಪರ ಈ ವಿಷಯಕ್ಕೆ ಹೋರಾಟ ಮಾಡಿದ ಕನ್ನಡ ಸೈನಿಕರ ದಯಮಾಡಿ ಬಿಡುಗಡೆಗೊಳಿಸಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಜಗ್ಗೇಶ್​ ಒತ್ತಾಯಿಸಿದ್ದಾರೆ. ‘ಕರ್ನಾಟಕದಲ್ಲಿ ಕನ್ನಡ ಭಾಷೆ ಸಾರ್ವಭೌಮ’ ಎಂದು ಅವರು ಬರೆದುಕೊಂಡಿದ್ದಾರೆ.

ನಿರ್ಮಾಪಕ ಕಾರ್ತಿಕ್​ ಗೌಡ, ನಿರ್ದೇಶಕ ಸಂತೋಷ್​ ಆನಂದ್​ರಾಮ್​ ಕೂಡ ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆ ಮಾಡುವಂತೆ ಅವರು ಒತ್ತಾಯಿಸಿದ್ದಾರೆ. ‘ಕನ್ನಡ ಕಲಿಗಳನ್ನ ಬಿಡುಗಡೆ ಮಾಡಿ. ನಮ್ಮ ಭಾಷೆ, ನಾಡು, ನೀರಿನ ಪರ ಧ್ವನಿಯಾಗುವುದು ನಮ್ಮ ಕರ್ತವ್ಯ. ಗಡಿಭಾಗದ ಕನ್ನಡಿಗರು ಹುಲಿಗಳು. ಜೈ ಹಿಂದ್ ಜೈ ಕರ್ನಾಟಕ ಮಾತೆ. ಬೆಳಗಾವಿ ಕರ್ನಾಟಕದ ಕಳಶ’ ಎಂದು ಸಂತೋಷ್​ ಆನಂದ್​ರಾಮ್​ ಬರೆದುಕೊಂಡಿದ್ದಾರೆ.

ನಟ ಉಪೇಂದ್ರ ಈ ಬಗ್ಗೆ ಬರೆದುಕೊಂಡಿದ್ದು ”ಕನ್ನಡ ದ್ವಜವನ್ನು ಕೆಲವು ಕಿಡಿಗೇಡಿಗಳು ಸುಟ್ಟಿದ್ದಾರೆ. ಈ ಕೃತ್ಯದ ಹಿಂದಿರುವ ಹೇಡಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆ ನೀಡಬೇಕು. ಇದಕ್ಕಾಗಿ ಹೋರಾಟ ಮಾಡಿದ ನಮ್ಮ ವೀರ ಕನ್ನಡಿಗರನ್ನು ಬಿಡುಗಡೆ ಮಾಡಬೇಕು. ನಮ್ಮ ನಾಡು ನುಡಿ ಸಂಸ್ಕ್ರತಿಯನ್ನು ಅಗೌರವಿಸುವ ಯಾರೇ ಆದರೂ ಅವರ ವಿರುದ್ದ ನಾವೆಲ್ಲರೂ ಒಗ್ಗಟ್ಟಾಗಿ ನಿಲ್ಲಲೇಬೇಕು. ಜೈ ಕನ್ನಡಾಂಬೆ” ಎಂದಿದ್ದಾರೆ.

Comments are closed.