Mumbai

ಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವ ನಿಧನ: ಅಭಿಮಾನಿಗಳ ಕಂಬನಿ

Pinterest LinkedIn Tumblr

ನವದೆಹಲಿ: ಭಾರತೀಯ ಚಿತ್ರರಂಗದ ಖ್ಯಾತ ಹಾಸ್ಯ ನಟ ರಾಜು ಶ್ರೀವಾಸ್ತವ ಅವರು ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು.

ಹಲವು ದಿನಗಳಿಂದ ರಾಜು ಶ್ರೀವಾಸ್ತವ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಗಸ್ಟ್ 10ರಂದು ದೆಹಲಿಯ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ರಾಜುಗೆ ಹೃದಯಾಘಾತವಾಯಿತು. ನಂತರ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕಳೆದ ಒಂದು ವಾರದಿಂದ ಅವರಿಗೆ ಇಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಿಂದಿ ಚಿತ್ರರಂಗದಿಂದ ರಾಜು ಶ್ರೀವಾಸ್ತವ ​ ಬಣ್ಣದ ಬದುಕು ಆರಂಭಿಸಿದರು. ‘ಮೈನೆ ಪ್ಯಾರ್ ಕಿಯಾ’, ‘ಬಾಜಿಗರ್​’, ‘ಬಾಂಬೆ ಟು ಗೋವಾ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ನಂತರ ಸ್ಟ್ಯಾಂಡಪ್​ ಕಾಮಿಡಿಯನ್ ಆಗಿಯೂ ಗುರುತಿಸಿಕೊಂಡರು. ‘ದಿ ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್​’ನಲ್ಲಿ ಎರಡನೇ ರನ್ನರ್​ ಅಪ್ ಆದರು. ಹಿಂದಿ ಬಿಗ್ ಬಾಸ್​ನ ಮೂರನೇ ಸೀಸನ್​ಗೆ ಅವರು ಸ್ಪರ್ಧಿ ಆಗಿದ್ದರು. ‘ಕಾಮಿಡಿ ಕಾ ಮಹಾ ಮುಕ್ಬಾಲ್​’, ‘ನಾಚ್ ಬಲಿಯೇ’ ರಿಯಾಲಿಟಿ ಶೋನ ಆರನೇ ಸೀಸನ್​ಗೆ ಅವರು ಸ್ಪರ್ಧಿ ಆಗಿದ್ದರು. ಸ್ಟ್ಯಾಂಡಪ್​ ಕಾಮಿಡಿ ಲೋಕದಲ್ಲಿ ರಾಜು ಶ್ರೀವಾಸ್ತವ ಅವರು ಅಪಾರ ಜನಪ್ರಿಯತೆ ಗಳಿಸಿದ್ದರು.

ರಾಜು ಶ್ರೀವಾಸ್ತವ ಅವರ ನಿಧನಕ್ಕೆ ಅಭಿಮಾನಿಗಳು, ಸ್ನೇಹಿತರು ಹಾಗೂ ಸೆಲೆಬ್ರಿಟಿಗಳು ಕಂಬಿನಿ ಮಿಡಿಯುತ್ತಿದ್ದಾರೆ. ಬಾಲಿವುಡ್​ನ ಅನೇಕ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.

 

 

Comments are closed.