ಕಲಬುರ್ಗಿ: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನ ಅರೆಮಲ್ಲಾಪುರದ ಶರಣಬಸವೇಶ್ವರ ಮಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಅವರು ಸೋಮವಾರ ಇಲ್ಲಿ ಕೇರಳದ ಮೀರಾ ಅವರೊಂದಿಗೆ ವಿವಾಹವಾದರು.
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹಾಗೂ ವಿವಿಧ ಮಠಗಳು ಸ್ವಾಮೀಜಿಗಳ ಸಮ್ಮುಖದಲ್ಲಿ ಕಲಬುರ್ಗಿಯ ಶರಣಬಸವೇಶ್ವರ ದೇವಸ್ಥಾನದಲ್ಲಿ ಈ ವಿವಾಹ ನೆರವೇರಿತು.
ಶ್ರೀರಾಮ ಸೇನೆಯ ಕಾರ್ಯಕರ್ತರು ವಿಭಾಗದಲ್ಲಿ ಪಾಲ್ಗೊಂಡಿದ್ದರು. ದೇವಸ್ಥಾನದ ದಾಸೋಹ ಚಾವಣಿಯ ಪ್ರತ್ಯೇಕ ಕೋಣೆಯಲ್ಲಿ ವೇದ ಮಂತ್ರ ಪಠಣದೊಂದಿಗೆ ಸ್ವಾಮೀಜಿ ಶಾಸ್ತ್ರೋಕ್ತವಾಗಿ ಸಪ್ತಪದಿ ತುಳಿದರು. ಶ್ರೀರಾಮ ಸೇನೆಯ ಕಾರ್ಯಕರ್ತರು ‘ಭಾರತ ಮಾತಾಕೀ ಜೈ’, ‘ಜೈ ಶ್ರೀರಾಮ’ ಘೋಷಣೆಗಳನ್ನು ಕೂಗಿದರು.(ಪ್ರಜಾವಾಣಿ )
Comments are closed.