ಬೆಂಗಳೂರು: ರಾಜ್ಯಾದ್ಯಂತ ಕ್ರಿಸ್ಮಸ್ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ರಾಜಧಾನಿ ಬೆಂಗಳೂರು, ಮೈಸೂರು,ಮಂಗಳೂರು, ಉಡುಪಿ, ಶಿವಮೊಗ್ಗ, ಕೋಲಾರ ಸೇರಿದಂತೆ ರಾಜ್ಯದೆಲ್ಲೆಡೆ ಚರ್ಚ್ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಕ್ರಿಸ್ಮಸ್ ಹಬ್ಬದ ಮುನ್ನಾದಿನವಾದ ಶನಿವಾರ ನಗರದ ವಿವಿಧ ಚರ್ಚ್ಗಳಲ್ಲಿ ಸಡಗರ ಮನೆ ಮಾಡಿತ್ತು. ಕ್ರೈಸ್ತ ಸಮುದಾಯದವರು ಶ್ರದ್ಧೆ ಭಕ್ತಿಯಿಂದ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಪುಟಾಣಿ ಮಕ್ಕಳು ವಿವಿಧ ವೇಷ ಭೂಷಣಗಳಿಂದ ಸಿಂಗರಿಸಿಕೊಂಡು ಏಸುವಿನ ಸಂದೇಶಗಳನ್ನು ಮೆಲುಕು ಹಾಕಿದರು.
ಹಬ್ಬದ ಅಂಗವಾಗಿ ಕ್ರೈಸ್ತ ಧರ್ಮದವರು ತಮ್ಮ ಮನೆ ಮತ್ತು ಚರ್ಚ್ಗಳನ್ನು ಸುಣ್ಣ-ಬಣ್ಣ, ವಿದ್ಯುತ್ ದೀಪಗಳಿಂದ ಅಲಂಕರಿಸಿದ್ದರು. ಯೇಸುವಿನ ಸಂದೇಶ ಸಾರುವ ಮತ್ತು ಕ್ರಿಸ್ಮಸ್ನ ಆಕರ್ಷಕವಾದ ಗೋದಲಿಯನ್ನು ಪ್ರತಿ ಮನೆಗಳಲ್ಲಿ ಪ್ರತಿಷ್ಠಾಪಿಸಲಾಗಿತ್ತು.
Comments are closed.