ಕರ್ನಾಟಕ

ಶಾಲಾ ಬಾಲಕನ ನಿಗೂಢ ಸಾವು; ಆಕ್ರೋಶಗೊಂಡ ತಿಭಟನಾಕಾರರಿಂದ ಶಾಲೆ ಧ್ವಂಸ

Pinterest LinkedIn Tumblr

ಬೆಳಗಾವಿ: 14 ವರ್ಷದ ಶಾಲಾ ಬಾಲಕನೊಬ್ಬ ನಿಗೂಡವಾಗಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಶಾಲೆಯ ಮೇಲೆ ದಾಳಿ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಬಿ.ಕೆ ಮಾಡೆಲ್ ಶಾಲೆಯ ಪ್ರಶಾಂತ್ ರಾಜು ಹುಲಿಮನಿ ಎಂಬ 8ನೇ ತರಗತಿ ವಿದ್ಯಾರ್ಥಿ ಬುಧವಾರ ಸಂಜೆ ಶಾಲೆ ಮೈದಾನದಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದಾನೆ. ಕೂಡಲೇ ಶಾಲಾ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷಿಸಿದ ವೈದ್ಯರು ಆತ ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ.

ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಶಾಲೆಯ ಕಿಟಿಕಿ ಬಾಗಿಲುಗಳನ್ನು ನಾಶಪಡಿಸಿದ್ದಾರೆ. ಸ್ಥಳಕ್ಕೆ ದಾವಿಸಿದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು. ತಪ್ಪಿತಸ್ಥರನ್ನು ಬಂಧಿಸುವರ ವರೆಗೂ ಶಾಲೆ ನಡೆಯಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

ಶಾಲಾ ಸಿಬ್ಬಂದಿ ಹಾಗೂ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನಿಸಿದರು ಪ್ರಯೋಜನವಾಗಲಿಲ್ಲ, ಆರೋಪಿಗಳನ್ನು ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ ನಂತರ ಪ್ರತಿಭಟನಾಕಾರರು ಸುಮ್ಮನಾದರು. ಈ ಸಂಬಂಧ ಬೆಳಗಾವಿ ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದಾರೆ.

Comments are closed.