ಕರಾವಳಿ

ಕೋಟೇಶ್ವರದಲ್ಲಿ ಯುವಕರಿಬ್ಬರ ಮೇಲೆ ಮಾರಣಾಂತಿಕ ಹಲ್ಲೆ: ಓರ್ವ ಗಂಭೀರ

Pinterest LinkedIn Tumblr

ಕುಂದಾಪುರ: ಬೈಕಿನಲ್ಲಿ ಹೋಗುತ್ತಿದ್ದ ಇಬ್ಬರು ಯುವಕರನ್ನು ತಡೆದು ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ಕೋಟೇಶ್ವರದಲ್ಲಿ ನಡೆದಿದೆ.

ಸ್ಥಳೀಯ ನಿವಾಸಿಗಳಾದ ಅಭಿಷೇಕ್ ಮೊಗವೀರ, ರಂಜಿತ್ ಹಲ್ಲೆಗೊಳಗಾದ ಯುವಕರಾಗಿದ್ದು, ಅಬಿಷೇಕ್ ಗಂಭೀರವಾಗಿ ಗಾಯಗೊಂಡಿದ್ದಾನೆ. ಹಿಂದೂ ಜಾಗರಣ ವೇದಿಕೆಯ ಕೋಟೇಶ್ವರದ ಕಾರ್ಯಕರ್ತರು ಈ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಕೋಟೇಶ್ವರದ ಕೊಡಿ ಹಬ್ಬಕ್ಕೆ ತಯಾರಿ ನಡೆಯುತ್ತಿದ್ದು ಬೈಕಿನಲ್ಲಿ ಅಭಿಷೇಕ್ ಹಾಗೂ ರಂಜಿತ್ ತೆರಳುತ್ತಿದ್ದ ವೇಳೆ ಅಡ್ಡಗಟ್ಟಿದ್ದ ಹಿಂಜಾವೇ ಕಾರ್ಯಕರ್ತರು ಎನ್ನಲಾದ ತಂಡವು ಇವರನ್ನು ಅಡ್ಡಗಟ್ಟಿ ರಾಡ್ ಹಾಗೂ ಮಾರಕಾಯುಧಗಳಿಂದ ಗಂಭೀರ ಹಲ್ಲೆ ನಡೆಸಿದ್ದಾರೆ. ಅಭಿಷೇಕ್ ಸ್ಥಿತಿ ಚಿಂತಾಜನಕವಾಗಿದ್ದು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬ ಮಾಹಿತಿಯಿದೆ. ರಂಜಿತ್ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ನಡೆಸಿದ ಗುಂಪಿನಲ್ಲಿ ಸುಮಾರು 15 ಕ್ಕೂ ಅಧಿಕ ಜನರಿದ್ದರು ಎನ್ನಲಾಗಿದೆ.

ಕುಂದಾಪುರ ಪೊಲೀಸರಿಂದ ತನಿಖೆ ನಡೆಯುತ್ತಿದ್ದು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Comments are closed.