ಕರಾವಳಿ

‘ಕೊರಗಜ್ಜನ ಪವಾಡ’: ದೈವಸ್ಥಾನದಿಂದ ಕದ್ದ ಬೆಳ್ಳಿ ಆಭರಣ ವಾಪಾಸ್ ತಂದಿಟ್ಟ ಕಳ್ಳರು!

Pinterest LinkedIn Tumblr

ಉಡುಪಿ: ತುಳುನಾಡ ದೈವಸ್ಥಾನಗಳು ಕಾರಣಿಕ ಶಕ್ತಿಯನ್ನು ಹೊಂದಿದೆ ಎನ್ನುವುದು ಎಲ್ಲೆಡೆ ಪ್ರಖ್ಯಾತಿ. ಕರಾವಳಿಯ ಕಾರಣಿಕ ದೈವಸ್ಥಾನದ ಮುಂದೆ ಖದೀಮ ಕಳ್ಳರು ಬೆದರಿ ಬೆಂಡಾಗುತ್ತಾರೆ. ದೈವಕ್ಕೆ ಕೇಡು ಬಗೆಯುವ ಹುಚ್ಚು ಸಾಹಸಕ್ಕೆ ಮುಂದಾಗೋದಿಲ್ಲ. ಅಂತದ್ದಾಗಿಯೂ ಏನಾದ್ರೂ ಕೇಡು ಬಗೆದಲ್ಲಿ ದೈವ ಶಕ್ತಿಗಳು ಆತನನ್ನು ಮಟ್ಟ ಹಾಕುತ್ತೆ ಅನ್ನೋದು ಮತ್ತೊಮ್ಮೆ ಸಾಬೀತಾಗಿದೆ.

ಉಡುಪಿಯ ಕಟಪಾಡಿಯ ಏಣಗುಡ್ಡೆ ಎಂಬಲ್ಲಿರೋ ನೀಚ ದೈವ ಅಥವಾ ಕರಾವಳಿಯಾದ್ಯಂತ ಅಜ್ಜ ಎಂದೇ ಗುರುತಿಸಿಕೊಂಡಿರುವ ಸ್ವಾಮಿ ಕೊರಗಜ್ಜನ ಆಭರಣಗಳನ್ನು ಕದ್ದೊಯ್ದಿದ್ದ ಕಳ್ಳನೊಬ್ಬ ತಾನಾಗಿಯೇ ಮಕರ ಸಂಕ್ರಮಣ ದಿನದಂದು ಕೆಲವೊಂದು ಬೆಳ್ಳಿ ಆಭರಣಗಳನ್ನು ತಂದು ದೈವಸ್ಥಾನದ ಬಾಗಿಲ ಬಳಿ ಎಸೆದು ಹೋಗಿದ್ದಾನೆ.

ಪವಾಡ ಅಂದ್ರೆ, ಕಳೆದ ವರುಷ ಅಕ್ಟೋಬರ್ 2 ರ ರಾತ್ರಿ ಇಲ್ಲಿ ಕಳವು ನಡೆದಿತ್ತು. ಆ ಬಳಿಕ ಅಷ್ಟಮಂಗಲ ಪ್ರಶ್ನೆ ಇಟ್ಟಾಗ ಮುಂದಿನ ಮಕರ ಸಂಕ್ರಮಣದೊಳಗಾಗಿ ಕದ್ದ ಆಭರಣ ದೈವಸ್ಥಾನ ಸೇರಲಿದೆ ಎನ್ನು ವಿಶ್ವಾಸವನ್ನು ಕೊರಗಜ್ಜ ನೀಡಿದ್ದ. ಇದೀಗ ಆ ಮಾತು ನಿಜವಾಗಿದ್ದು ಮಕರ ಸಂಕ್ರಮಣದ ದಿನ ಕದ್ದ ಕೆಲವು ಬೆಳ್ಳಿ ಆಭರಣಗಳು ದೈವಸ್ಥಾನ ಸೇರಿವೆ.

ಖದೀಮರು ದೈವಸ್ಥಾನದ ಬಾಗಿಲ ಬಳಿ ಕೆಲವು ಆಭರಣ ತಂದಿಟ್ಟು ಹೋಗಿದ್ದು, ಕೊರಗಜ್ಜನ ಮಹಿಮೆಗೆ ಕೈ ಗನ್ನಡಿ ಹಿಡಿದಂತಾಗಿದೆ..ಸದ್ಯ ತಂದಿಟ್ಟ ಬೆಳ್ಳಿಯ ಪರಿಕರಗಳು ಕಾಪು ಠಾಣಾ ಪೊಲೀಸರ ವಶದಲ್ಲಿದೆ.ಇನ್ನೂ ಒಂದಿಷ್ಟು ಆಭರಣಗಳು ಬಾಕಿ ಇದ್ದು ಅದನ್ನೂ ಕದ್ದೊಯ್ದ ಕಳ್ಳರು ತಂದಿಡುವ ವಿಶ್ವಾಸವನ್ನು ಗ್ರಾಮಸ್ಥರು ಹೊಂದಿದ್ದಾರೆ..

Comments are closed.