ಕರ್ನಾಟಕ

ಲಕ್ಷಗಟ್ಟಲೇ ಖರ್ಚು ಮಾಡಿದ ಕನಸಿನ ಮನೆಯಲ್ಲಿ ‘ನಾಗಪ್ಪನ’ ದರ್ಬಾರ್; ಮಂಡ್ಯದ ರೈತ ಕುಟುಂಬ ಕಂಗಾಲು…!

Pinterest LinkedIn Tumblr

ಮಂಡ್ಯ: ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿದ ಮನೆಯ ಗೃಹಪ್ರವೇಶಕ್ಕೂ ಮುನ್ನ ನಾಗಪ್ಪ ಬಂದು ಮನೆಯಲ್ಲಿ ನೆಲೆಸಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬಿದರ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತರಾಗಿರುವ ಮಹೇಶ್ ಎಂಬವರು ತಮ್ಮ ಜಮೀನಿನಲ್ಲಿ 8 ವರ್ಷಗಳ ಹಿಂದೆ ಮನೆ ಕಟ್ಟಲು ಆರಂಭಿಸಿದ್ದರು. ಆದರೆ ನಿರ್ಮಾಣ ಹಂತದಲ್ಲಿದ್ದ ಮನೆಯಲ್ಲಿ ಹುತ್ತ ಬೆಳೆಯಲಾರಂಭಿಸಿತ್ತು. ಮೊದಲಿಗೆ ಮಹೇಶ್ ಹುತ್ತವನ್ನು ಕಿತ್ತು ಹಾಕಿ ಮನೆ ನಿರ್ಮಾಣದ ಕಡೆ ಗಮನಕೊಟ್ಟರು. ಆದರೆ ನಂತರ ಮಹೇಶ್ ಅವರ ಆರ್ಥಿಕ ಸಂಕಷ್ಟ ಹೆಚ್ಚಿ, ಮಕ್ಕಳಿಗೆ ಆರೋಗ್ಯದ ಸಮಸ್ಯೆ ಶುರುವಾಗಿತ್ತು.ಇದರಿಂದ ಹೆದರಿರೋ ಮಹೇಶ್ ಮನೆಯೊಳಗೆ ಬೆಳೆದ ಹುತ್ತವನ್ನು ಹಾಗೇ ಬಿಟ್ಟಿದ್ದಾರೆ. ಒಂದು ಬಾರಿ ಹಾವು ಕಾಣಿಸಿಕೊಂಡಿದ್ದು, ಹುತ್ತ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ. ಅರ್ಧದಷ್ಟು ಪೂರ್ಣಗೊಂಡಿರುವ ಮನೆಯಲ್ಲಿ ಕಳೆದೊಂದು ವರ್ಷದಿಂದ ವಾಸಿಸುತ್ತಿದ್ದು, ಹುತ್ತಕ್ಕೆ ಪೂಜೆ ಸಲ್ಲಿಸುತ್ತಿದ್ದಾರೆ.

ಮೊದಲು ಅಡುಗೆ ಮನೆಯಲ್ಲಿ ನಂತರ ದೇವರ ಮನೆ ಮುಂಭಾಗ ಮೂಡಿದ ಹುತ್ತವು ಬಳಿಕ ಮನೆಯ ದಕ್ಷಿಣಾ ದಿಕ್ಕಿನಲ್ಲಿ ಮೂಡಿದೆ. ಅಲ್ಲದೇ ಅದೇ ಭಾಗದಲ್ಲಿ ಕಟ್ಟಿಕೊಂಡಿವೆ ಜೇನು ಗೂಡು ಮತ್ತು ಕಾಡು ಪಾರಿವಾಳದ ಗೂಡು.

Comments are closed.