ಕರ್ನಾಟಕ

ರೈತ ನಾಯಕ, ಶಾಸಕ ಪುಟ್ಟಣ್ಣಯ್ಯ ಹೃದಯಾಘಾತದಿಂದ ನಿಧನ

Pinterest LinkedIn Tumblr

ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್‌.ಪುಟ್ಟಣ್ಣಯ್ಯ (69) ಭಾನುವಾರ ರಾತ್ರಿ 10.45ಕ್ಕೆ ಹೃದಯಾಘಾತದಿಂದ ಇಲ್ಲಿ ನಿಧನರಾದರು.

ಅವರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ. ಪಾಂಡವಪುರ ತಾಲ್ಲೂಕಿನ ಕ್ಯಾತನಹಳ್ಳಿ ಗ್ರಾಮದ ಅವರು, ಎರಡು ಬಾರಿ ಶಾಸಕರಾಗಿದ್ದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ವರಾಜ್‌ ಇಂಡಿಯಾ ಪಕ್ಷದಿಂದ ಸ್ಪರ್ಧಿಸಲು ಅಣಿಯಾಗಿದ್ದರು.

ಮಂಡ್ಯದಲ್ಲಿ ಭಾನುವಾರ ಆಯೋಜಿಸಿದ್ದ ಪ್ರೊ ಕಬಡ್ಡಿ ವೀಕ್ಷಿಸುತ್ತಿದ್ದಾಗ ಕುಸಿದುಬಿದ್ದ ಅವರನ್ನು ನಗರದ ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು.

ಅಲ್ಲಿ ಚಿಕಿತ್ಸೆ ಸ್ಪಂದಿಸದೆ ಮೃತಪಟ್ಟರು. 6 ವರ್ಷಗಳ ಹಿಂದೆ ಅವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಆಗಿತ್ತು. ಸ್ವಗ್ರಾಮದಲ್ಲಿ ಸೋಮವಾರ ಅಂತ್ಯಕ್ರಿಯೆ ನಡೆಯಲಿದೆ.

Comments are closed.