ಕರಾವಳಿ

ಜುಮ್ಮಾ ಮಸೀದಿ ಹಾಗೂ ಬಾಲಯೇಸು ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೊ

Pinterest LinkedIn Tumblr

ಮಂಗಳೂರು : ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್ ಲೋಬೊರವರು ಸೋಮವಾರ ಮಂಗಳೂರಿನ ಬಂದರಿನಲ್ಲಿರುವ ಕೇಂದ್ರ ಜುಮ್ಮಾ ಮಸೀದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಬಾಲ ಯೇಸು ಮಂದಿರ

ಇದಕ್ಕೂ ಮೊದಲು ಜೆ.ಆರ್ ಲೋಬೊ ಅವರು ಕದ್ರಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಬಾಲ ಯೇಸು ಮಂದಿರಕ್ಕೆ ತೆರಳಿದ ಅವರು ಪ್ರಾರ್ಥನೆ ಸಲ್ಲಿಸಿದರು.

ಇಂದು ಬೆಳಿಗ್ಗೆ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ ಲೋಬೋ ಅವರು ಬಳಿಕ ಅಲ್ಲಿಂದ ಮೆರವಣಿಗೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿಗೆ ಬಂದ ಜೆ.ಆರ್ ಲೋಬೊ ಅವರು ಮಂಗಳೂರು ಮಹಾನಗರ ಪಾಲಿಕೆಯಲ್ಲಿನ ಚುನಾವಣಾಧಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

Comments are closed.