ಕರಾವಳಿ

ಮಂಗಳೂರಿನ ಜನನಿಬಿಡ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಬೆಂಕಿಗಾಹುತಿ

Pinterest LinkedIn Tumblr

ಮಂಗಳೂರು, ಮೇ 17: ನಗರದ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಏಕಾಏಕಿ ಬೆಂಕಿ ಹತ್ತಿಕೊಂಡು ಉರಿದು ಭಾಗಶ ಹಾನಿಗೊಂಡ ಘಟನೆ ಗುರುವಾರ ಬೆಳಿಗ್ಗೆ ನಗರದ ಜ್ಯೋತಿ ಸಿನಿಮಾ ಮಂದರದ ಸಮೀಪದ ಅಂಬೇಡ್ಕರ್ ವೃತ್ತದ ಬಳಿ ಸಂಭವಿಸಿದೆ.

ಇಂದು ಬೆಳಿಗ್ಗೆ ನಗರದ ಜ್ಯೋತಿಯ ಮುಖ್ಯ ರಸ್ತೆಯಲ್ಲಿ ಚಲಿಸುತ್ತಿದ್ದ ಇಂಡಿಕಾ ಕಾರು ಅಂಬೇಡ್ಕರ್ ವೃತ್ತ ಸಮೀಪಿಸುತ್ತಿದ್ದಂತೆ ಕಾರಿನಲ್ಲಿ ಇದ್ದಕ್ಕಿದ್ದಂತೆಯೇ ಹೊಗೆ ಕಾಣಿಸಿಕೊಂಡಿದೆ.ಅಪಾಯದ ಮುನ್ಸೂಚನೆ ಅರಿತ ಚಾಲಕ ಮತ್ತಿತರರು ತಕ್ಷಣ ಕಾರಿನಿಂದ ಇಳಿದು ಅಪಾಯದಿಂದ ಪಾರಾಗಿದ್ದಾರೆ.ಆದರೆ ಕ್ಷಣಾರ್ಧದಲ್ಲಿ ಕಾರಿಗೆ ಬೆಂಕಿ ಆವರಿಸಿದ್ದು, ಕಾರು ಧಗಧಗನೆ ಹೊತ್ತಿಕೊಂಡು ಉರಿದಿದೆ.

ಸ್ಥಳದಲ್ಲಿದ್ದವರು ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕರೆ ಮಾಡಿ ಮಾಹಿತಿ ತಿಳಿದಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಧಗಧಗನೆ ಉರಿಯುತ್ತಿದ್ದ ಬೆಂಕಿಯನ್ನು ನೀರು ಹಾಕಿ ನಂದಿಸಿದ್ದಾರೆ. ಆದರೆ ಅದಾಗಲೇ ಕಾರು ಬಹುತೇಕ ಸುಟ್ಟು ಕರಕಲಾಗಿದೆ.ಅವಘಡದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರಸ್ತೆಯ ಮಧ್ಯದ್ದಲ್ಲಿಯೇ ಎಲ್ಲರೂ ನೋಡ ನೋಡುತ್ತಿದ್ದಂತೆ ಕಾರು ಧಗಧಗನೆ ಉರಿಯತೊಡಗಿದೆ. ಜನನಿಬಿಡ ರಸ್ತೆಯಲ್ಲೇ ಈ ದುರ್ಘಟನೆ ನಡೆದ ಕಾರಣ ಜನರು ಕ್ಷಣಕಾಲ ಅವಕ್ಕಾದರು.

Comments are closed.