ಕರಾವಳಿ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಹಿನ್ನೆಲೆ: ಮಂಗಳೂರಿನಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ

Pinterest LinkedIn Tumblr

ಮಂಗಳೂರು, ನವೆಂಬರ್.06: ರಾಜ್ಯದ ಮೂರು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಕ್ಕೆ ಶನಿವಾರ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೇರಿದಂತೆ ಮೈತ್ರಿಕೂಟಕ್ಕೆ ಭರ್ಜರಿ ಗೆಲುವು ಲಭಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯ ಮುಂದೆ ವಿಜಯೋತ್ಸವ ಆಚರಿಸಲಾಯಿತು.

ಪಕ್ಷದ ಮುಖಂಡರು, ಕಾರ್ಯಕರ್ತರು ರಾಜ್ಯ ಮತ್ತು ರಾಷ್ಟ್ರಮಟ್ಟದ ಹಿರಿಯ ನಾಯಕರ ಪರ ಘೋಷಣೆ ಕೂಗಿದರಲ್ಲದೆ, ಸಿಹಿತಿಂಡಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.ಮನಪಾ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್, ಪಕ್ಷದ ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಸದಾಶಿವ ಉಳ್ಳಾಲ್, ಡಿ.ಕೆ.ಅಶೋಕ್ ಕುಮಾರ್, ಸಂತೋಷ್ ಕುಮಾರ್, ಅಬೂಬಕರ್ ಕುದ್ರೋಳಿ, ಶಬ್ಬೀರ್ ಸಿದ್ಧಕಟ್ಟೆ, ನಝೀರ್ ಬಜಾಲ್ ಮತ್ತಿತರರು ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.

Comments are closed.