ಕರಾವಳಿ

ಮದುವೆ ಕಾರ್ಯಕ್ರಮ: ಮಾಜಿ ಪ್ರಧಾನಿ ದೇವೇಗೌಡ, ಸಿಎಂ ಕುಮಾರ ಸ್ವಾಮಿ, ಸಚಿವ ಜಮೀರ್ ಅಹ್ಮದ್ ಖಾನ್ ಇಂದು ಮಂಗಳೂರಿಗೆ

Pinterest LinkedIn Tumblr

 

ಮಂಗಳೂರು ನವೆಂಬರ್ 16 : ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೆಗೌಡ, ಹೆಚ್.ಡಿ.ಮುಖ್ಯಮಂತ್ರಿ ಕುಮಾರ ಸ್ವಾಮಿ, ಸಚಿವ ಜಮೀರ್ ಅಹ್ಮದ್ ಖಾನ್ ಸಹಿತಾ ರಾಜ್ಯ ಸಮ್ಮಿಶ್ರ ಸರಕಾರದ ಹಲವು ಸಚಿವರು ಇಂದು ಮಂಗಳೂರಿಗೆ ಆಗಮಿಸಲಿದ್ದಾರೆ.

ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೆಗೌಡ ಹಾಗೂ ಹೆಚ್.ಡಿ.ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಪ್ರತ್ಯೇಕ ವಿಮಾನಗಳಲ್ಲಿ ಇಂದು ಸಂಜೆ 4.05 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 4.30 ಗಂಟೆಗೆ ಉಳ್ಳಾಲ ಬೀಚ್‌ನಲ್ಲಿ ಎಂ.ಎಲ್.ಸಿ, ಬಿ.ಎಂ ಫಾರೂಕ್ ರವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಬಳಿಕ ಹೆಚ್.ಡಿ. ದೇವೆಗೌಡ ಅವರುಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಜಮೀರ್ ಅಹ್ಮದ್ ಖಾನ್ ಪ್ರವಾಸ :

ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳು, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಹಾಗೂ ಹಜ್ ಸಚಿವ ಬಿ. ಜೆಡ್. ಜಮೀರ್ ಅಹ್ಮದ್ ಖಾನ್ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ.

ನವೆಂಬರ್ 16 ರಂದು ಪೂರ್ವಾಹ್ನ 9 ಗಂಟೆಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ, ಪೂರ್ವಾಹ್ನ 10 ಗಂಟೆಗೆ ಪರಿವೀಕ್ಷಣಾ ಮಂದಿರ, ಮಂಗಳೂರು ಇಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಮಧ್ಯಾಹ್ನ 12.30 ಗಂಟೆಗೆ ಉಳ್ಳಾಲ ದರ್ಗಾಕ್ಕೆ ಭೇಟಿ. ಸಂಜೆ 5.30 ಗಂಟೆಗೆ ಉಳ್ಳಾಲ ಬೀಚ್ ಇಲ್ಲಿ ಎಂ.ಎಲ್.ಸಿ, ಬಿ.ಎಂ ಫಾರೂಕ್ ಫಾರೂಕ್ ರವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಂಗಳೂರಿನಲ್ಲಿ ವಾಸ್ತವ್ಯ.

ನವೆಂಬರ್ 17 ರಂದು ಪೂರ್ವಾಹ್ನ 9 ಗಂಟೆಗೆ ದೇರಳಕಟ್ಟೆ ಕಣಚೂರು ಪ್ಯಾರ ಮೆಡಿಕಲ್ ಕಾಲೇಜ್ ನ್ಯೂ ಬ್ಲಾಕ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಪೂರ್ವಾಹ್ನ 9.30 ಗಂಟೆಗೆ ಮಂಗಳೂರಿನಿಂದ ಉಡುಪಿಗೆ ತೆರಳಲಿದ್ದಾರೆ. ರಾತ್ರಿ 9.50 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ವಾಪಾಸಾಗಲಿದ್ದಾರೆ.

ನಾಳೆ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಮಂಗಳೂರಿಗೆ :

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆರ್. ಶಂಕರ್ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಇಂತಿವೆ.

ನವೆಂಬರ್ 17 ರಂದು ಪೂರ್ವಾಹ್ನ 9 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, 9.45 ಗಂಟೆಗೆ ಕಾಸರಗೋಡು-ಗಡಿನಾಡು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. 1.30 ಗಂಟೆಗೆ ಕರ್ನಾಟಕ ಗೇರು ಅಭಿವೃದ್ಧಿ ನಿಗಮ, ಅಬ್ಬಕ್ಕನಗರ, ಕೊಟ್ಟಾರ, ಮಂಗಳೂರು ಇದರ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನಿರ್ದೇಶಕರ ಮಂಡಳಿಯ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ  2.30 ಗಂಟೆಗೆ ಗೇರು ಸಂಸ್ಕರಣಾ ಘಟಕಗಳಿಗೆ ಭೇಟಿ ಹಾಗೂ ಪರಿಶೀಲನೆ ನಡೆಸಲಿದ್ದಾರೆ.

ರಾತ್ರಿ 7 ಗಂಟೆಗೆ ಫಿಜಾ ಗಾರ್ಡನ್, ಕೃಷ್ಣಾಪುರ, ಮಂಗಳೂರು ಇಲ್ಲಿ ಎಂ.ಎಲ್.ಸಿ, ಬಿ.ಎಂ ಫಾರೂಕ್ ರವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 9.55 ಗಂಟೆಗೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

Comments are closed.