ಮಂಗಳೂರು, ನವೆಂಬರ್.19 : ಪ್ರವಾದಿ ಮುಹಮ್ಮದ್ ಅವರ ಜನ್ಮ ದಿನ ಮೀಲಾದುನ್ನಬಿ ಆಚರಣೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವೆಂಬರ್ 20 ( ಮಂಗಳವಾರ) ರಂದು ನಡೆಯಲಿರುವುದರಿಂದ ನಾಳೆ ಜಿಲ್ಲೆಯಲ್ಲಿ ಸರಕಾರಿ ರಜೆ ಘೋಷಿಸಲಾಗುವುದು ಎಂದು ನಗರಾಭಿವೃದ್ಧಿ ಮತ್ತು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಮೀಲಾದ್ ಸರಕಾರಿ ರಜೆ ನ.21 ರಂದು ನಿಗದಿಯಾಗಿದ್ದರೂ, ದ.ಕ. ಜಿಲ್ಲೆಯಲ್ಲಿ ಮೀಲಾದ್ 20 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ನ. 21 ರ ಸರಕಾರಿ ರಜೆಯನ್ನು ಬದಲಾಯಿಸಿ ನ. 20 ರಂದು ಶಾಲಾ ಕಾಲೇಜುಗಳಿಗೆ, ಸರಕಾರಿ ಕಚೇರಿಗಳಿಗೆ ರಜಾ ದಿನವನ್ನಾಗಿ ಪರಿಗಣಿಸಲು ಹಾಗೂ ನ.21 ರಂದು ಎಂದಿನಂತೆ ಕಾರ್ಯನಿರ್ವಹಿಸಲು ಆದೇಶ ಹೊರಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಿತ್ತು.
ಈ ಬಗ್ಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಾಳೆ ರಜೆ ಘೋಷಿಸಿ ಸೋಮವಾರ ಸರಕಾರಿ ಆದೇಶ ಹೊರಡಿಸಲಾಗಿದೆ ಎಂದು ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
Comments are closed.