ಕರಾವಳಿ

ಕೂಳೂರು ಜಂಕ್ಸನ್ ಬಳಿ ಪಾದಚಾರಿಯೋರ್ವರಿಗೆ ಬಸ್ ಢಿಕ್ಕಿ :ಸ್ಥಳದಲ್ಲೇ ಮೃತ್ಯು

Pinterest LinkedIn Tumblr

ಮಂಗಳೂರು, ನವೆಂಬರ್.28: ಬಸ್ ಢಿಕ್ಕಿ ಹೊಡೆದು ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ನಗರದ ಕೂಳೂರು ಜಂಕ್ಸನ್ ಬಳಿ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಕೂಳೂರು ನಿವಾಸಿ ಭೋಜ (45) ಎಂದು ಗುರುತಿಸಲಾಗಿದೆ.

ಕಳೆದ ಹಲವಾರು ವರ್ಷಗಳಿಂದ ಮಂಗಳೂರಿನಲ್ಲಿ ಇಲೆಕ್ಟ್ರಿಶಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಎಂದಿನಂತೆ ನಿನ್ನೆ ಕೂಡ ತನ್ನ ಕರ್ತವ್ಯ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಮಂಗಳೂರಿನಿಂದ ಸುರತ್ಕಲ್ ಮಾರ್ಗವಾಗಿ ಪಡುಬಿದ್ರೆಗೆ ತೆರಳುತ್ತಿದ್ದ ಖಾಸಗಿ ಬಸ್ ಕೂಳೂರು ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬೋಜರಿಗೆ ಢಿಕ್ಕಿ ಹೊಡೆದಿದೆ. ಬಸ್ ಢಿಕ್ಕಿ ಹೊಡೆದ ಬಳಿಕ ಹಿಂಬಂದಿ ಚಕ್ರ ಇವರ ಮೇಲೆ ಚಲಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ನಗರ ಉತ್ತರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments are closed.