ಕರಾವಳಿ

ಬಂದ್ ಕರೆ ಹಿನ್ನೆಲೆ : ಉಡುಪಿ-ಮಂಗಳೂರಿನ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ

Pinterest LinkedIn Tumblr

ಮಂಗಳೂರು, ಜನವರಿ.08: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ಬಂದ್ ಸಂದರ್ಭ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಾರದೆಂಬ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲಾ ಶಾಲಾ ಹಾಗೂ ಕಾಲೇಜುಗಳಿಗೆ ಇಂದು (ಜನವರಿ 8) ದ.ಕ‌. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರಜೆ ಘೋಷಿಸಿದ್ದಾರೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳಾದ ಇಂಟಕ್, ಎಐಟಿಯುಸಿ, ಸಿಐಟಿಯು, ಎಚ್‌ಎಂಎಸ್, ಎಐಯುಟಿಯುಸಿ, ಯುಟಿಯುಸಿ, ಬ್ಯಾಂಕ್, ಇನ್ಶೂರೆನ್ಸ್, ಪೋಸ್ಟ್, ಆರ್‌ಎಂಎಸ್, ರೈಲ್ವೆ, ಬಿಎಸ್ಸೆನ್ನೆಲ್, ಸರಕಾರಿ ನೌಕರರು, ಖಾಸಗಿ ಸಾರಿಗೆ ನೌಕರರು, ಬಸ್, ಆಟೊ ಚಾಲಕರ ಸಹಿತ ಕಾರ್ಮಿಕ ವಲಯವು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ.

Comments are closed.