ಮಂಗಳೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಮಂಗಳೂರು ಜಿಲ್ಲಾ ಸಮಿತಿಯಿಂದ ಮಾಧ್ಯಮ ಕಾರ್ಯಗಾರವು ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ಸಹಭಗಿತ್ವದಲ್ಲಿ ರವೀಂದ್ರ ಕಲಾಭವನದಲ್ಲಿ ಬುಧವಾರ ನಡೆಯಿತು.
ಪತ್ರಕರ್ತರ ಕ್ಷೇಮ ನಿಧಿಗೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು, ತಮ್ಮ ವೇತನದಿಂದ ಪತ್ರಕರ್ತರ ಕ್ಷೇಮಾಭಿವೃದ್ಧಿ ಕಾರ್ಯಕ್ಕೆ 5೦೦೦೦ ಸಾವಿರ ರೂ .ನೀಡಿದರು.
ಬಳಿಕ ಮಾತನಾಡಿದ ಸಚಿವರು, ಪತ್ರಕರ್ತರು ಪ್ರಜಾಪ್ರಭುತ್ವದ 4ನೇ ಅಂಗವಾಗಿದೆ.ಸಮಾಜದ ಒಳಿತು ಕೆಡಕು ಪ್ರಶ್ನಿಸುವುದು ಮಾಧ್ಯಮ.ಹಾಗಾಗಿ ಪತ್ರಕರ್ತರ ಸೂಕ್ತ ಬದ್ಧತೆಯೂ ಅವಶ್ಯವಾಗಿದ್ದು ಈ ನಿಟ್ಟಿನಲ್ಲಿ ಕ್ಷೇಮಾಭಿವೃದ್ಧಿ ಕಾರ್ಯಕ್ಕೆ ತಮ್ಮ ವೇತನದಿಂದ ಧನಸಹಾಯ ಮಾಡುತ್ತಿರುವುದಾಗಿ ತಿಳಿಸಿದರು.
Comments are closed.