ಕರಾವಳಿ

ಕುಂದಾಪುರ: ದರ್ಗಾಕ್ಕೆ ತೆರಳಿ ವಾಪಾಸ್ಸಾಗುವಾಗ ರಸ್ತೆ ಅಪಘಾತ: ಮಹಿಳೆ ದಾರುಣ ಸಾವು

Pinterest LinkedIn Tumblr

ಕುಂದಾಪುರ: ಇಲ್ಲಿಗೆ ಸಮೀಪದ ಬಸ್ರೂರು ಮಾರ್ಗೋಳಿಯ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಸಂಭವಿಸಿದ ಲಾರಿ ಹಾಗೂ ಸ್ಕೂಟರ್‌ ಡಿಕ್ಕಿಯಲ್ಲಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಮಹಿಳೆಯೊರ್ವರು ತೀವೃವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತರಾಗಿರುವ ದಾರುಣ ಘಟನೆ ಸಂಭವಿಸಿದೆ.

ಮೃತರನ್ನು ಕೋಡಿ ನಿವಾಸಿ ಮೈಮೂನ(50) ಎಂದು ಗುರುತಿಸಲಾಗಿದೆ. ಗುರುವಾರ ತಮ್ಮ ತವರು ಮನೆಯಾದ ಗುಲ್ವಾಡಿಯ ದರ್ಗಾಕ್ಕೆ ಪೂಜೆಗೆ ತೆರಳಿದ್ದ ಅವರು ಪತಿಯೊಂದಿಗೆ ಬಸ್ರೂರು ಮಾರ್ಗವಾಗಿ ಕೋಡಿ ಹಿಂತಿರುತ್ತಿದ್ದ ವೇಳೆ ಮಾರ್ಗೋಳಿ ಬಳಿಯಲ್ಲಿ ಶಿವಮೊಗ್ಗ ಕಡೆಯಿಂದ ಸರಕು ತುಂಬಿಕೊಂಡು ಬರುತ್ತಿದ್ದ 10 ಚಕ್ರದ ಲಾರಿ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಸ್ಕೂಟರ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ಮೈಮೂನ ಅವರ ಮೇಲೆ ಹರಿದ ಲಾರಿ ಚಕ್ರಗಳು ಅವರ ದೇಹವನ್ನು ಛಿದ್ರಗೊಳಿಸಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತರಾಗಿದ್ದಾರೆ. ಅವರ ಪತಿ ಹಾಜಿ ಸಣ್ಣ ಪುಟ್ಟ ಗಾಯಗಳೊಂದಿಗೆ ಜೀವಾಪಯದಿಂದ ಪಾರಾಗಿದ್ದಾರೆ.

ಅಪಘಾತದಿಂದಾಗಿ ಒಂದಷ್ಟು ಹೊತ್ತು ಹೆದ್ದಾರಿಯ ವಾಹನ ಸಂಚಾರಕ್ಕೆ ತೊಡಕುಂಟಾಗಿತ್ತು. ಸ್ಥಳಕ್ಕೆ ಕುಂದಾಪುರ ಉಪವಿಭಾಗದ ಡಿವೈಎಸ್‌ಪಿ ಬಿ.ಪಿ.ದಿನೇಶ್ ಕುಮಾರ್, ಸರ್ಕಲ್‌ ಇನ್ಸ್‌ಪೆಕ್ಟರ್‌ ಮಂಜಪ್ಪ, ಕುಂದಾಪುರ ಠಾಣಾಧಿಕಾರಿ ಹರೀಶ್ ಹಾಗೂ ಕಂಡ್ಲೂರು ಠಾಣಾಧಿಕಾರಿ ಶ್ರೀಧರ ನಾಯ್ಕ್ ಆಗಮಿಸಿ ಸಂಚಾರ ವ್ಯವಸ್ಥೆಯನ್ನು ತಿಳಿಗೊಳಿಸಿದರು. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.