ಕರಾವಳಿ

ಡಾ| ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯ : ಕ್ಯಾ.ಗಣೇಶ್ ಕಾರ್ಣಿಕ್ ಸಂತಾಪ

Pinterest LinkedIn Tumblr

ಮಂಗಳೂರು : ನಡೆದಡುವ ದೇವರು ಶ್ರೀ ಸಿದ್ಧಾಗಂಗ ಮಠದ ಯತಿವರ್ಯರಾದ ಡಾ| ಶ್ರೀ ಶಿವಕುಮಾರ ಸ್ವಾಮೀಜಿಯವರು ಲಿಂಗೈಕ್ಯರಾಗಿರುವುದಕ್ಕೆ ವಿಧಾನಪರಿಷತ್ತಿನ ಮಾಜಿ ಸದಸ್ಯರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ನಿತ್ಯ ದಾಸೋಹ ಕೈಂಕರ್ಯದಲ್ಲಿ ತಮ್ಮನ್ನು ತೋಡಗಿಸಿಕೊಂಡಿದ್ದ ಶ್ರೀಗಳು ಸಹಸ್ರಾರು ವಿದ್ಯಾರ್ಥಿಗಳಿಗೆ ವಿದ್ಯೆ, ಅನ್ನ ಹಾಗೂ ಆಸರೆಯ ಮೂಲಕ ಬೆಳಕಾದವರು. ಸಮಾಜದ ಪ್ರಗತಿಗಾಗಿ ನಿರಂತರ ಶ್ರಮಿಸಿದ ಶ್ರೀ ಗಳು ನಾಡಿಗೆ ಅಪಾರ ಕೊಡುಗೆ ನೀಡಿದ್ದರು.

ಶ್ರೀ ಗಳ ಆತ್ಮಕ್ಕೆ ಸದ್ಗತಿ ದೊರೆಯಲಿ ಅವರ ಅಗಲುವಿಕೆಯ ದು:ಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ನಾಡಿನ ಜನತೆಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Comments are closed.