ಮಂಗಳೂರು, ಜನವರಿ 28: ಅಕ್ಮೆ ಮೂವೀಸ್ ಇಂಟರ್ನ್ಯಾಷನಲ್ ಲಾಂಛನದಲ್ಲಿ ತಯಾರಾಗುತ್ತಿರುವ ದುಬೈಯ ಖ್ಯಾತ ಉದ್ಯಮಿ, ಮಾರ್ಚ್ – 22 ಕನ್ನಡ ಚಲನಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸುತ್ತಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ ಇಂಗ್ಲಿಷ್ ತುಳು ಸಿನಿಮಾದ ಮಹೂರ್ತ ಸಮಾರಂಭವು ಸೋಮವಾರ ಬೆಳಗ್ಗೆ ಮಂಗಳೂರಿನ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಿತು.
ಚಿತ್ರದ ನಿರ್ಮಾಪಕರಾದ ಹರೀಶ್ ಶೇರಿಗಾರ್ ಮತ್ತು ಶರ್ಮಿಳಾ ಶೇರಿಗಾರ್ ಕ್ಲ್ಯಾಪ್ ಮಾಡಿದರು. ಒಡಿಯೂರು ಶ್ರೀ ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಮತ್ತು ಶರವು ಕ್ಷೇತ್ರದ ಶ್ರೀ ರಾಘವೇಂದ್ರ ಶಾಸ್ತ್ರಿ ಕ್ಯಾಮರ ಚಾಲನೆ ಮಾಡಿ, ಚಿತ್ರಕ್ಕೆ ಶುಭಾಕೋರಿದರು.
ಸಮಾರಂಭದಲ್ಲಿ ತುಳು ಚಿತ್ರ ನಿರ್ಮಾಪರಾದ ಕಿಶೋರ್.ಡಿ ಶೆಟ್ಟಿ, ರಿಚರ್ಡ್ ಕ್ಯಾಸ್ಟಲಿನೋ, ಕರ್ನಾಟಕ ರಾಜ್ಯ ದೇವಾಡಿಗರ ಸಂಘದ ಅಧ್ಯಕ್ಷ ಡಾ.ಕೆ.ದೇವರಾಜ್, ಪ್ರಮುಖರಾದ ಉದ್ಯಮಿ ಸನತ್ ಶೆಟ್ಟ್, ಕೆ.ವಿ.ದೇವಾಡಿಗ, ಕೆ.ಆರ್.ಶ್ರೀಯಾನ್ ಅಥಿತಿಗಳಾಗಿ ಪಾಲ್ಗೊಂಡಿದ್ದರು.
ಚಿತ್ರದ ನಿರ್ದೇಶಕ ಕೆ. ಸೂರಜ್ ಶೆಟ್ಟಿ, ಕಲರ್ಸ್ ಕನ್ನಡದ ವಿನಯ್ ರಾವ್, ಕ್ಯಾಮರಮ್ಯಾನ್ ಕೃಷ್ಣ ಸಾರಾಥಿ, ಕಲಾವಿದ ಬೋಜರಾಜ್ ವಾಮಂಜೂರ್, ಚಿತ್ರರಂಗದ ಪ್ರಮುಖರಾದ ಪ್ರಕಾಶ್ ಪಾಂಡೇಶ್ವರ್, ಮೋಹನ್ ಕೊಪ್ಪಲ, ತಾರಾನಾಥ ಶೆಟ್ಟಿ ಬೋಳಾರ್, ದಿನೇಶ್ ಶೆಟ್ಟಿ, ಮುಖೇಶ್ ಹೆಗ್ಡೆ, ನಾಯಕ ನಟ ಪೃಥ್ವಿ ಅಂಬರ್, ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ, ನಿತೇಶ್ ಶೆಟ್ಟಿ ಎಕ್ಕಾರ್, ಹರೀಶ್ ಶೇರಿಗಾರ್ ಅವರ ಸಹೋದರರಾದ ಶ್ರೀನಿವಾಸ್ ಶೇರಿಗಾರ್, ಪ್ರಕಾಶ್ ಶೇರಿಗಾರ್ ಮೊದಲಾದವರು ಉಪಸ್ಥಿತರಿದ್ದರು.
ಮಾರ್ಚ್ 22, ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ, ಯಾನ ಮೊದಲಾದ ಕನ್ನಡ ಸಿನಿಮಾಗಳನ್ನು ನಿರ್ಮಿಸಿರುವ ಹರೀಶ್ ಶೇರಿಗಾರ್ ಅವರು ಮೊದಲ ಬಾರಿಗೆ ತುಳು ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಸಿನಿಮಾದಲ್ಲಿ ಖ್ಯಾತ ನಟ ಅನಂತನಾಗ್ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸಿನಿಮಾಕ್ಕೆ ದ.ಕ.ಜಿಲ್ಲೆ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ.
ಸಿನಿಮಾಕ್ಕೆ ಕೃಷ್ಣ ಸಾರಥಿ ಛಾಯಾಗ್ರಹಣ ಮಾಡಲಿದ್ದಾರೆ. ಸಂಕಲನ: ಮನು ಶೇಡ್ಗಾರ್, ಸಂಗೀತ: ಮಣಿಕಾಂತ್ ಕದ್ರಿ, ಸಾಹಿತ್ಯ ಶಶಿರಾಜ್ ಕಾವೂರು, ಅರ್ಜುನ್ ಲೂಯಿಸ್, ಡಿಸೈನ್ ದೇವಿ ರೈ, ಸಿನಿಮಾಕ್ಕೆ ಕತೆ, ಚಿತ್ರಕತೆ, ಸಂಭಾಷಣೆ , ನಿರ್ದೇಶನ ಕೆ. ಸೂರಜ್ ಶೆಟ್ಟಿ ತಾರಾಗಣದಲ್ಲಿ ಪೃಥ್ವಿ ಅಂಬರ್, ನವ್ಯ ಪೂಜಾರಿ, ನವೀನ್ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ ವಾಮಂಜೂರು, ವಿಸ್ಮಯ ನಾಯಕ್, ದೀಪಕ್ ರೈ ಪಾಣಾಜೆ, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಪ್ರಸನ್ನ ಬೈಲೂರು, ರವಿರಾಮ ಕುಂಜ ಮೊದಲಾದವರು ಇದ್ದಾರೆ.
_ ಸತೀಶ್ ಕಾಪಿಕಾಡ್
Comments are closed.