ಮಂಗಳೂರು : ಸಂಜಾತ ಹಿರಿಯರಾಜಕೀಯ ಮುತ್ಸದ್ಧಿ ದಿವಂಗತ ಜಾರ್ಜ್ ಫೆರ್ನಾಂಡಿಸ್ರವರಿಗೆ 23ನೇ ಜಿಲ್ಲಾಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಮರ್ಪಣೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ನುಡಿದರು.
ನಗರದ ಪುರಭವನದಲ್ಲಿ ಜರಗುತ್ತಿರುವ ಸಮ್ಮೇಳನದ ಉದ್ಘಾಟನಾ ವೇದಿಕೆಯಲ್ಲಿ ಜಾರ್ಜ್ ಫೆರ್ನಾಂಡಿಸ್ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿಗೈದು ಶ್ರದ್ಧಾಂಜಲಿ ಸಲ್ಲಿಸಲಾಯ್ತು.
ಸಮ್ಮೇಳನಾಧ್ಯಕ್ಷ ಡಾ. ಬಿ.ಎಂ ಹೆಗ್ಡೆ, ಉದ್ಘಾಟಕರಾದ ಹಿರಿಯ ಸಾಹಿತಿ ನಾ. ಡಿ’ಸೋಜಾ, ಮಹಿಳಾ ಸಾಹಿತಿ ಎ. ಪಿ. ಮಾಲತಿ, ಏರ್ಯ ಲಕ್ಷ್ಮೀ ನಾರಾಯಣ ಆಳ್ವ, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ,ಪ್ರೊ. ಎಂ. ಬಿ. ಪುರಾಣಿಕ್, ಎ. ಜೆ. ಶೆಟ್ಟಿ, ನೀಲಾವರ ಸುರೇಂದ್ರ ಅಡಿಗ, ಹರಿಕೃಷ್ಣ ಪುನರೂರು, ಡಾ. ಲಿಯೋ ಡಿ’ಸೋಜಾಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
Comments are closed.