ಕರಾವಳಿ

ಉಗ್ರರ ದಾಳಿಗೆ ವ್ಯಾಪಕ ಖಂಡನೆ : ಉಗ್ರರ ವಿರುದ್ಧ ಸರ್ಜಿಕಲ್ ದಾಳಿ ನಡೆಸುವಂತೆ ಆಗ್ರಹ

Pinterest LinkedIn Tumblr

ಮಂಗಳೂರು, ಫೆಬ್ರವರಿ 15: ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳದ ವತಿಯಿಂದ ಶುಕ್ರವಾರ ನಗರದ ಪಿವಿಎಸ್ ವೃತ್ತದ ಬಳಿ ಬೃಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ನೂರಾರು ಕಾರ್ಯಕರ್ತರು ಪಾಕಿಸ್ತಾನದ ವಿರುದ್ಧ ಘೋಷಣೆ ಕೂಗಿದರು. ಇದೇ ವೇಳೆ ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೈನಿಕರ ಮೇಲೆ ನಡೆದ ಉಗ್ರರ ದಾಳಿಯ ಪ್ರತೀಕಾರವಾಗಿ ಉಗ್ರರ ವಿರುದ್ಧ ಇನ್ನೊಂದು ಸರ್ಜಿಕಲ್ ಸ್ಟ್ರೈಕ್ ಗಾಗಿ ಆಗ್ರಹಿಸಿ ಘೋಷಣೆ ಕೂಗಿದರು.

ಸರ್ಜಿಕಲ್ ದಾಳಿ ಹಾಗೂ ಭಾರತೀಯ ಸೇನೆ ಕಾಶ್ಮೀರದಲ್ಲಿ ಆರಂಭಿಸಿದ್ದ ಆಪರೇಷನ್ ಆಲ್ ಔಟ್ ಬಳಿಕ ಹೆದರಿ ಭೂಗತರಾಗಿದ್ದ ಪಾಕ್ ಪ್ರೇರಿತ ಉಗ್ರರು ಸಿ ಆರ್ ಪಿ ಎಫ್ ಯೋಧರ ವಾಹನದ ಮೇಲೆ ನಡೆಸಿದೆ. ಜೈಷ್ ಎ-ಮೊಹಮ್ಮದ್ ಸಂಘಟನೆಯ ಉಗ್ರನೋರ್ವ ಸಿಆರ್ ಪಿಎಫ್ ವಾಹನವನ್ನು ಗುರಿಯಾಗಿಸಿಕೊಂಡು ನಡೆಸಿದ ಆತ್ಮಾಹುತಿ ದಾಳಿಗೆ 42 ಯೋಧರು ಹುತಾತ್ಮರಾಗಿದ್ದಾರೆ. ಈ ದಾಳಿ ಬಗ್ಗೆ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಉಗ್ರರಿಗೆ ತಕ್ಕ ಪಾಠ ಕಲಿಸಲು ಸರ್ಜಿಕಲ್ ಸ್ಟ್ರೈಕ್ ದಾಳಿ ನಡೆಸುವಂತೆ ಒತ್ತಾಯ ಕೇಳಿ ಬರುತ್ತಿದೆ.

Comments are closed.