ಕರಾವಳಿ

ಸ್ಟೇಟ್‌ಬ್ಯಾಂಕ್ ಸಮೀಪ ರಸ್ತೆ ಬದಿಯಲ್ಲಿ ಶವ ಪತ್ತೆ : ಕಲ್ಲಿನಿಂದ ಜಜ್ಜಿ ಕೊಲೆ ಶಂಕೆ!..

Pinterest LinkedIn Tumblr

ಮಂಗಳೂರು, ಮಾರ್ಚ್. 17: ನಗರದ ಸ್ಟೇಟ್ ಬ್ಯಾಂಕ್ ಸಮೀಪ ಬಂದರು ದಕ್ಕೆಗೆ ಸಾಗುವ ರಸ್ತೆ (ಬದ್ರಿಯ ಕಾಲೇಜ ಬಳಿ) ಬದಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಕೊಲೆಯಾದ ಸ್ಥಿತಿಯಲ್ಲಿ ರವಿವಾರ ಬೆಳಗ್ಗೆ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಸುಮಾರು 35 ವರ್ಷ ವಯಸ್ಸಿನ ತಮಿಳುನಾಡು ಮೂಲದ ಕಾರ್ಮಿಕ ಎಂದು ಗುರುತಿಸಲಾಗಿದ್ದು, ಯಾರೋ ದುಷ್ಕರ್ಮಿಗಳು ಶನಿವಾರ ತಡರಾತ್ರಿ ಕೊಲೆ ಮಾಡಿರ ಬೇಕೆಂದು ಶಂಕಿಸಲಾಗಿದೆ.

ಕಾರ್ಮಿಕನನ್ನು ನಿನ್ನೆ ತಡರಾತ್ರಿ ಕಲ್ಲಿನಿಂದ ಜಜ್ಜಿ ಕೊಲೆಗೈಯಲಾಗಿದೆ. ಪ್ರಕರಣ ಇಂದು ಬೆಳಗ್ಗೆ ಬೆಳಗ್ಗೆ ಬೆಳಕಿಗೆ ಬಂದಿದೆ. ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Comments are closed.