ಮಂಗಳೂರು: ದ.ಕ. ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಕಾಂಗ್ರೆಸ್ ಯುವ ನಾಯಕ ಮಿಥುನ್ ರೈ ಅವರು ಇಂದು ನಾಮಪತ್ರ ಸಲ್ಲಿಸಿದ ಬಳಿಕ ಶ್ರೀ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಅ ಬಳಿಕ ಧರ್ಮಸ್ಥಳ ಹೊರವಲಯದಲ್ಲಿರುವ ಅಂಗಡಿ ಮುಂಗಟ್ಟುಗಳಿಗೆ ಸಾವಿರಾರು ಕಾರ್ಯಕರ್ತರೊಂದಿಗೆ ತೆರಳಿ ಮತ ಯಾಚಿಸಿದರು. ಈ ವೇಳೆ ರಾಜ್ಯ ನಗರಾಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಮಾಜಿ ಸಚಿವರಾದ ಬಿ. ರಮಾನಾಥ ರೈ ಹಾಗೂ ಅಭಯಚಂದ್ರ ಜೈನ್, ವಿಧಾನಪರಿಷತ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮೊದಲಾದವರು ಪ್ರಚಾರದಲ್ಲಿ ಭಾಗವಹಿಸಿದ್ದರು. ನಂತರ ಮಿಥುನ್ ರೈ ಕನ್ಯಾಡಿ ಶ್ರೀ ರಾಮ ಕ್ಷೇತ್ರಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
Comments are closed.