ಕರಾವಳಿ

ಕೋಟ ಜೋಡಿ ಕೊಲೆ ಪ್ರಕರಣ: ಆರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

Pinterest LinkedIn Tumblr

ಕುಂದಾಪುರ: ಕೋಟ ಸಮೀಪದ ಮಣೂರಿನಲ್ಲಿ ಜ.26 ರ ತಡರಾತ್ರಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ 16 ಆರೋಪಿಗಳ ಪೈಕಿ ಜಾಮೀನು ನೀಡುವಂತೆ ವಕೀಲರ ಮೂಲಕ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿರುವ ಆರು ಆರೋಪಿಗಳ ಜಾಮೀನು ಅರ್ಜಿಯನ್ನು ಇಲ್ಲಿನ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕಾಶ್ ಖಂಡೇರಿ ತಿರಸ್ಕರಿಸಿದ್ದಾರೆ.

ಪ್ರಕರಣದ ಪ್ರಮುಖ ಆರೋಪಿ ಹರೀಶ್ ರೆಡ್ಡಿ, ಒಳಸಂಚು ನಡೆಸಿದ ಆರೋಪ ಹೊತ್ತಿರುವ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್, ಡಿ.ಎ.ಆರ್. ಪೊಲೀಸ್‌ ಸಿಬ್ಬಂದಿಗಳಾದ ಪವನ್‌ ಅಮೀನ್‌, ವಿರೇಂದ್ರ ಆಚಾರ್ಯ ಹಾಗೂ ಪ್ರಕರಣದಲ್ಲಿ ಭಾಗಿಯಾದ ಮಹೇಶ್ ಹಾಗೂ ರವಿಚಂದ್ರಗೆ ಜಾಮೀನು ನೀಡುವಂತೆ ವಕೀಲರು ಕುಂದಾಪುರದಲ್ಲಿನ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ಸಲ್ಲಿಸಿ ಜಾಮೀನು ನೀಡುವ ಕುರಿತು ವಾದ ಮಂಡಿಸಿದ್ದರು. ಪ್ರಾಸಿಕ್ಯೂಶನ್ ಪರ ಜಿಲ್ಲಾ ಸರ್ಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿಯವರು ಇತ್ತೀಚೆಗೆ ವಾದ ಮಂಡಿಸಿದ್ದು ಜಾಮೀನು ಅರ್ಜಿ ವಜಾಗೊಳಿಸುವಂತೆ ಮನವಿ ಮಾಡಿದ್ದರು.

ಆರೋಪಿಗಳ ಪರ ಹಾಗೂ ಪ್ರಾಸಿಕ್ಯೂಶನ್‌ ಪರವಾಗಿ ನಡೆದ ವಾದಗಳನ್ನು ಆಲಿಸಿದ ನ್ಯಾಯಾದೀಶರು ಶನಿವಾರ ಆದೇಶ ನೀಡಿದ್ದು ಆರು ಮಂದಿ ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತಗೊಳಿಸಿದ್ದಾರೆ.

ಜನತೆಯನ್ನು ಬೆಚ್ಚಿಬೀಳಿಸಿದ ಜೋಡಿ ಕೊಲೆ ಪ್ರಕರಣವು ಇನ್ನೂ ತನಿಖಾ ಹಂತದಲ್ಲಿದ್ದು ಆರೋಪಿತರಿಗೆ ಈ ಸಂದರ್ಭ ಜಾಮೀನು ನೀಡುವುದರಿಂದ ಸಾಕ್ಷ್ಯ ನಾಶ ಸಂಭವವಿದೆ. ಕೆಲ ಆರೋಪಿಗಳು ಪ್ರಭಾವಿಗಳು ಆಗಿದ್ದು ತನಿಖೆಯ ದಿಕ್ಕು ತಪ್ಪಿಸುವ ಸಾಧ್ಯತೆಗಳಿದೆ. ಆರೋಪಿತರಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳಾದ ಕಾರಣ ಒಂದೊಮ್ಮೆ ಜಾಮೀನು ನೀಡಿದಲ್ಲಿ ಆ ಪ್ರಭಾವ ಬಳಸಿ ಸಾಕ್ಷ್ಯ ನಾಶಗೊಳಿಸುವ ಸಾಧ್ಯತೆಯೂ ಇರುವ ಬಗ್ಗೆ ನ್ಯಾಯಾಲಯದ ಗಮನಕ್ಕೆ ತರಲಾಗಿತ್ತು.

ಈ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದ ಸುದ್ದಿಗಳು-

ಕೋಟದಲ್ಲಿ ತಲವಾರು ದಾಳಿ: ಕ್ಷುಲ್ಲಕ ಕಾರಣಕ್ಕೆ ಹರಿಯಿತು ಇಬ್ಬರ ನೆತ್ತರು (Updated)

ಆಪ್ತಮಿತ್ರರಿಬ್ಬರ ಬರ್ಬರ ಕೊಲೆ ಪ್ರಕರಣ: ಕೋಟ ಹೆದ್ದಾರಿಯಲ್ಲಿ ಶವವಿಟ್ಟು ಪ್ರತಿಭಟನೆ (Video)

ಟಾಯ್ಲೆಟ್ ಪಿಟ್ ನಿರ್ಮಾಣದ ತಕರಾರು: ಆಪ್ತ ಮಿತ್ರರಿಬ್ಬರ ಮೇಲೆ ತಲವಾರು ಬೀಸಿದ ಹಂತಕರು

ಕೋಟ ಆಪ್ತಮಿತ್ರರನ್ನು ಕೊಂದ ಕೊಲೆಗಾರರ ಪತ್ತೆಗೆ ಚುರುಕುಗೊಂಡ ತನಿಖೆ

ಕೋಟದಲ್ಲಿ ಸ್ನೇಹಿತರಿಬ್ಬರ ಮರ್ಡರ್ ಕೇಸ್: ಆರೋಪಿಗಳಿಗಾಗಿ ಮುಂದುವರಿದ ಶೋಧ

ಕೋಟ ಅವಳಿ ಕೊಲೆ: ಹರೀಶ್ ರೆಡ್ಡಿ ಸಹಚರರು ಇನ್ನೂ ಭೂಗತ!

ಇನ್ನೂ ಪತ್ತೆಯಾಗದ ಕೊಲೆಗಾರರು; ನ್ಯಾಯಕ್ಕಾಗಿ ಆಗ್ರಹಿಸಿ ಫೆ.3ಕ್ಕೆ ಕೋಟ ಬಂದ್

ಕೋಟದಲ್ಲಿ ಅವಳಿ ಕೊಲೆ ಪ್ರಕರಣ: ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಬಂದ್, ಪ್ರತಿಭಟನೆ (Video)

ಕೋಟ ಅವಳಿ ಕೊಲೆ ಪ್ರಕರಣದ ಆರೋಪಿಗಳ ಬಂಧನ? ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ ಅಂತೆಕಂತೆ!

ಕೋಟ ಡಬ್ಬಲ್ ಮರ್ಡರ್ ಕೇಸ್: ಇಬ್ಬರು ಆರೋಪಿಗಳ ಬಂಧನ

ಕೋಟ ಸ್ನೇಹಿತರ ಕೊಲೆಗೆ ಜಿ.ಪಂ ಸದಸ್ಯನೇ ಸೂತ್ರಧಾರಿ; ಪೊಲೀಸರಿಂದ 6 ಮಂದಿ ಬಂಧನ

ಕೋಟ ಅವಳಿ ಕೊಲೆಯ ಆರು ಆರೋಪಿಗಳಿಗೆ ಫೆ.15ರವರೆಗೆ ಪೊಲೀಸ್ ಕಸ್ಟಡಿ, ಮುಂದುವರಿಯಲಿದೆ ತನಿಖೆ

ಕೋಟ ಜೋಡಿ ಕೊಲೆ ಪ್ರಕರಣ ನಡೆದ ಮನೆಯಲ್ಲಿ ಮಹಜರು; ಕೃತ್ಯಕ್ಕೆ ಬಳಸಿದ್ದ 2 ಬೈಕ್ ವಶ

ಕೋಟ ಸ್ನೇಹಿತರಿಬ್ಬರ ಕೊಲೆ ಪ್ರಕರಣ: ರೆಡ್ಡಿಗೆ ಸಹಕರಿಸಿದ ಇಬ್ಬರು ಪೊಲೀಸರು ಅರೆಸ್ಟ್

ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿದ ಬಿಜೆಪಿಯವರಿಂದ ಕೊಲೆಗಡುಕರಿಗೆ ಬೆಂಬಲ: ಮಾಜಿ ಸಚಿವ ಸೊರಕೆ

ಕೋಟ ಸ್ನೇಹಿತರಿಬ್ಬರ ಕೊಲೆಯಲ್ಲಿ ಭಾಗಿಯಾದವನೂ ಸೇರಿ ಮತ್ತೆ ಐದು ಮಂದಿ ಬಂಧನ

ಕೋಟ ಜೋಡಿ ಕೊಲೆಗೆ ನ್ಯಾಯ ಕೇಳಿ ದೇವರ ಮೊರೆ ಹೋದವರಿಗೆ ಸಿಕ್ಕಿತು ಭರವಸೆಯ ನುಡಿ (Video

ಕೋಟ ಡಬಲ್ ಮರ್ಡರ್ ಕೇಸಿನ ಪ್ರಮುಖ ಆರೋಪಿ ಚಂದ್ರಶೇಖರ್ ರೆಡ್ಡಿ ಸಮೇತ ಇನ್ನೋರ್ವ ಬಂಧನ(Updated)

ಕೋಟ ಡಬಲ್ ಮರ್ಡರ್ ಕೇಸಿನ 16 ಆರೋಪಿಗಳು ನ್ಯಾಯಾಲಯಕ್ಕೆ ಹಾಜರು: ಇಬ್ಬರಿಗೆ ಪೊಲೀಸ್ ಕಸ್ಟಡಿ (Video)

ಕೋಟ ಡಬಲ್ ಮರ್ಡರ್ ಆರೋಪಿ ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್ ಬಿಜೆಪಿಯಿಂದ  ಅಮಾನತು

ಕೋಟ ಮರ್ಡರ್ ಕೇಸಿನ ಮೂವರು ಆರೋಪಿಗಳಿಗೆ ಜೈಲೋ? ಬೇಲೋ? ಫೆ.19 ಕ್ಕೆ ಆದೇಶ

ಕೋಟ ಮರ್ಡರ್ ಕೇಸಿನ ಮೂವರು ಆರೋಪಿಗಳಿಗೆ ಸದ್ಯ ಜೈಲೇ ಗತಿ; ಓರ್ವನಿಗೆ ಪೊಲೀಸ್ ಕಸ್ಟಡಿ

ಕೋಟ ಜೋಡಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

 

Comments are closed.