ಕರಾವಳಿ

ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಮೂಡಬಿದಿರೆ ಪರಿಸರದಲ್ಲಿ ಮತಯಾಚನೆ

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮೂಡಬಿದಿರೆಯ ಪಡುಕೊಣಾಜೆ ಮಾಯಿಲೋಡಿ ಪರಿಸರ ಸೇರಿದಂತೆ ವಿವಿಧೆಡೆಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್, ಮಂಡಲಾಧ್ಯಕ್ಷ ಈಶ್ವರ್ ಕಟೀಲ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸುಕೇಶ್ ಮೂಡಬಿದ್ರೆ ಹಾಗೂ ಮೊದಲಾದವರು ಉಪಸ್ಥಿತರಿದ್ದರು.

ವಿ.ಸಿ ಕ್ಯಾಶೂ ಇಂಡಸ್ಟ್ರೀಸ್ ಗೆ ಭೇಟಿ:

ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ದರೆಗುಡ್ಡೆಯಲ್ಲಿರುವ ವಿ.ಸಿ ಕ್ಯಾಶೂ ಇಂಡಸ್ಟ್ರೀಸ್ ಗೆ ಭೇಟಿ ನೀಡಿದ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ದ.ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುದರ್ಶನ್, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅದಿಕಾರಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕಸ್ತೂರಿ ಪಂಜ, ಮುಲ್ಕಿ ಮೂಡಬಿದ್ರೆ ಕ್ಷೇತ್ರ ಬಿಜೆಪಿ ಮಂಡಲಾಧ್ಯಕ್ಷ ಈಶ್ವರ್ ಕಟೀಲ್, ಮುಲ್ಕಿ ಮೂಡದಿದ್ರೆ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಇನ್ನಿತರ ಮುಖಂಡರು ಹಾಗೂ ಕಾರ್ಯಕರ್ತರು ಜೊತೆಗಿದ್ದರು.

ಎಸ್.ಕೆ.ಎಫ್ ಇಂಡಸ್ಟ್ರೀಸ್ ಗೆ ಭೇಟಿ:

ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಬನ್ನಡ್ಕದ ಎಸ್.ಕೆ.ಎಫ್ ಇಂಡಸ್ಟ್ರೀಸ್ ಗೆ ಭೇಟಿ ನೀಡಿದ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಅಭ್ಯರ್ಥಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಮತ ಯಾಚಿಸಿದರು.

ಈ ಸಂದರ್ಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್,ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ದ.ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುದರ್ಶನ್, ದ.ಕ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಗದೀಶ್ ಅದಿಕಾರಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಕಸ್ತೂರಿ ಪಂಜ, ಮುಲ್ಕಿ ಮೂಡಬಿದ್ರೆ ಕ್ಷೇತ್ರ ಬಿಜೆಪಿ ಮಂಡಲಾಧ್ಯಕ್ಷ ಈಶ್ವರ್ ಕಟೀಲ್, ಮುಲ್ಕಿ ಮೂಡದಿದ್ರೆ ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಇನ್ನಿತರ ಮುಖಂಡರು ಹಾಗೂ ಕಾರ್ಯಕರ್ತರು ಜೊತೆಗಿದ್ದರು.

Comments are closed.