ಕರಾವಳಿ

ಕ್ರಿಕೇಟ್ ಬೆಟ್ಟಿಂಗ್‌ ; ಮೂವರು ಬುಕ್ಕಿಗಳ ಬಂಧನ – ನಗದು ಸಹಿತಾ 60 ಸಾವಿರದ ಸೊತ್ತು ವಶ

Pinterest LinkedIn Tumblr

ಮಂಗಳೂರು : ನಗರದ ಕಾವೂರು ಠಾಣಾ ವ್ಯಾಪ್ತಿಯ ಮೂಡುಶೆಡ್ಡೆ ಗಾಲ್ಪ್ ಕ್ಲಬ್ ಬಳಿ ಕ್ರಿಕೇಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಮಂಗಳೂರು ನಗರ ಉತ್ತರ ಉಪವಿಭಾಗ ರೌಡಿ ನಿಗ್ರಹ ದಳದ ಪೊಲೀಸರು ಹಾಗೂ ಕಾವೂರು ಠಾಣಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಉಳಾಯಿಬೆಟ್ಟು ಬಾಡಿಗೆ ಮನೆಯಲ್ಲಿ ವಾಸ್ತವ್ಯ ಹೊಂದಿರುವ ಮಯ್ಯದ್ದಿ (37 ), ಗುರುಪುರ ಸತ್ಯ ದೇವತಾ ಮಂದಿರದ ಬಳಿ ನಿವಾಸಿ ಕುಮಾರ್ ಶೆಟ್ಟಿ (39 ) ಹಾಗೂ ಮೂಡುಶೆಡ್ಡೆಯ ಉಮೇಶ್ ಮೂಡುಶೆಡ್ಡೆ (47) ಎಂದು ಹೆಸರಿಸಲಾಗಿದೆ.

ಆರೋಪಿಗಳು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ನಗರದ ಕಾವೂರು ಠಾಣಾ ವ್ಯಾಪ್ತಿಯ ಮೂಡುಶೆಡ್ಡೆ ಗಾಲ್ಪ್ ಕ್ಲಬ್ ಬಳಿ M market Play 63 Online, ಮತ್ತು M Market Play 63 online ಎಂಬ ಬೆಟ್ಟಿಂಗ್ ಮೊಬೈಲ್ ಅಪ್ಲಿಕೇಶನ್ ಮೂಲಕ RCB Vs Rajasthan Royals ಮಧ್ಯೆ ನಡೆಯುತ್ತಿರುವ ಏಕದಿನ ಕ್ರಿಕೆಟ್ ಮ್ಯಾಚ್ ಗೆ ಸಂಬಂಧಪಟ್ಟು , ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತಾ ಕ್ರಿಕೆಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಲಾಗಿದೆ.

ಇವರು ಬೆಟ್ಟಿಂಗ್ ನಲ್ಲಿ ಸಂಗ್ರಹವಾದ ಹಣವನ್ನು ಪಡೆದುಕೊಂಡು ಹೋಗಲು ಸದ್ರಿ ಸ್ಥಳಕ್ಕೆ ವಿಶಾಲ್ ಮತ್ತು ಅಶೋಕ್ ಎಂಬವರು ಬರುವ ಬಗ್ಗೆ ಹಾಗೂ ಈ ಇಬ್ಬರು ವ್ಯಕ್ತಿಗಳು ಈ ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್ ನನ್ನು ಡೌನ್ ಲೋಡ್ ಮಾಡಿಕೊಡುವ ಬಗ್ಗೆ ಮಂಗಳೂರು ನಗರ ಉತ್ತರ ಉಪವಿಭಾಗ ರೌಡಿ ನಿಗ್ರಹ ದಳಕ್ಕೆ ಮಾಹಿತಿ ದೊರೆತ ಮೇರೆಗೆ ರೌಡಿ ನಿಗ್ರಹ ದಳದ ಪೊಲೀಸ್ ಉಪ ನಿರೀಕ್ಷಕರಾದ ಶೀತಲ್ ಅಲಗೂರು ಮತ್ತು ಅವರ ತಂಡ ಮಾಹಿತಿಯನ್ನು ಕೂಡಲೇ ಕಾವೂರು ಪೊಲೀಸ್ ನಿರೀಕ್ಷಕರಿಗೆ ಬರವಣಿಗೆಯಲ್ಲಿ ನೀಡಿ ಪೊಲೀಸ್ ನಿರೀಕ್ಷಕರು ಮತ್ತು ರೌಡಿ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾತ್ಮೀದಾರರು ತಿಳಿಸಿದ ಸ್ಳಳಕ್ಕೆ ಜಂಟಿಯಾಗಿ ಧಾಳಿ ನಡೆಸಿ ಕ್ರಿಕೇಟ್ ಬೆಟ್ಟಿಂಗ್ ಅಕ್ರಮ ದಂಧೆಯಲ್ಲಿ ತೊಡಗಿಕೊಂಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳು ಕ್ರಿಕೇಟ್ ಬೆಟ್ಟಿಂಗ್ ಅಕ್ರಮ ದಂಧೆಗೆ ಉಪಯೋಗಿಸುತ್ತಿದ್ದ ಆ್ಯಪ್ ಹೊಂದಿರುವ 4 ಮೊಬೈಲ್, ಅವರುಗಳು ಸಾರ್ಜನಿಕರಿಂದ ಅಕ್ರಮ ಬೆಟ್ಟಿಂಗ್ ದಂಧೆಗೆ ಸಂಗ್ರಹಿಸಿದ್ದ ರೂ.26000 ನಗದು ಹಣವನ್ನು ಪಂಚರ ಸಮಕ್ಷಮ ಸ್ವಾಧೀನಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ ರೂ. 66000 ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀನಿವಾಸ್ ಆರ್. ಗೌಡ ವರ ನೇತ್ರತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಣಂಬೂರು ಪೊಲೀಸ್ ನಿರೀಕ್ಷಕರಾದ ಕೆ. ಆರ್. ನಾಯಕ್. ಮಂಗಳೂರು ಉತ್ತರ ಉಪವಿಭಾಗ ರೌಡಿ ನಿಗ್ರಹದಳದ ಪೊಲೀಸ್ ಉಪ ನಿರೀಕ್ಷಕ ರಾದ ಶೀತಲ್ ಅಲಗೂರು, ರೌಡಿ ನಿಗ್ರಹದಳದ ಎ.ಎಸ್. ಐ. ಮೊಹಮ್ಮದ್, ಕುಶಲ ಮಣಿಯಾಣಿ, ಸತೀಶ್ ಎಂ. ವಿಜಯ ಕಾಂಚನ್, ಇಸಾಕ್, ಶರಣ್ ಕಾಳಿ ಮತ್ತು ಕಾವೂರು ಪೊಲೀಸರು ಪಾಲ್ಗೊಂಡಿದ್ದರು.

Comments are closed.