ಮಂಡ್ಯ: ಹೈವೋಲ್ಟೆಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಇಂದು ಮತದಾನವಾಗುತ್ತಿದ್ದು, ಬೆಳಗ್ಗೆಯಿಂದ ಶಾಂತಿಯುತ ಮತದಾನ ನಡೆದಿದೆ. ಆದರೆ, ಅಂಬರೀಷ್ ಅವರ ಸ್ವಗ್ರಾಮ ದೊಡ್ಡರಸಿನಕೆರೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಇಬ್ಬರೂ ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ.
ದೊಡ್ಡರಸಿನಕೆರೆಯಲ್ಲಿ ಮತದಾನ ಮಾಡಲು ಸುಮಲತಾ ಅಂಬರೀಷ್ ಆಗಮಿಸಿದ್ದರು. ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಿದ್ದರು. ಈ ವೇಳೆ ನಿಖಿಲ್ ಅವರನ್ನು ಹೆಗಲ ಮೇಲೆ ಹೊತ್ತುಕೊಂಡ ಬೆಂಬಲಿಗರು ನಿಖಿಲ್ಗೆ ಜೈಕಾರ ಕೂಗಿದರು. ನಂತರ ನಿಖಿಲ್-ಸುಮಲತಾ ಇಬ್ಬರೂ ಮುಖಾಮುಖಿಯಾದರು. ಈ ವೇಳೆ ಬೆಂಬಲಿಗರು ತಮ್ಮ ತಮ್ಮ ನಾಯಕರ ಪರ ಘೋಷಣೆ ಕೂಗಲು ಆರಂಭಿಸಿದರು. ಈ ವೇಳೆ ಪರಸ್ಪರರ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ಬೆಂಬಲಿಗರು ಮುಂದಾದರು. ಆಗ ಪೊಲೀಸರು ಲಘ ಲಾಠಿ ಚಾರ್ಜ್ ನಡೆಸಿ, ಪರಿಸ್ಥಿತಿ ಹತೋಟಿಗೆ ತಂದರು.
ನಂತರ ಮಾತನಾಡಿದ ನಿಖಿಲ್, ಇಬ್ಬರು ಮುಖಾಮುಖಿಯಾದ್ವಿ. ಅಕ್ಕಾ ನಮಸ್ಕಾರ ಅಂದೆ ಅಷ್ಟೇ ಎಂದು ಪ್ರತಿಕ್ರಿಯಿಸಿದ್ದಾರೆ.
Comments are closed.