ಕರಾವಳಿ

ಜಿಲ್ಲೆಯ ಜನತೆಗೆ ಕೃತಜ್ಞತೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಪಾಲ್ಗೊಂಡು ತಮ್ಮ ಅತ್ಯಮೂಲ್ಯ ಮತಗಳನ್ನು ಚಲಾಯಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಮತದಾರ ಬಾಂಧವರಿಗೆ , ಇಡೀ ಜಿಲ್ಲೆಯ ಮಹಾಜನತೆಗೆ ನನ್ನ ಹೃದಯ ತುಂಬಿದ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ದಾಖಲೆ ಮಾತದಾನವಾಗಲು ನೆರವಾದ ಹಾಗೂ ಮತದಾನ ಪ್ರಕ್ರಿಯೆ ಶಾಂತಿಯುತವಾಗಿ ನಡೆಯಲು ಸಹಕರಿಸಿದ ದಕ್ಷಿಣ ಕನ್ನಡ ಜಿಲ್ಲಾಡಳಿತ, ಪೊಲೀಸ್, ಹೋಮ್ ಗಾರ್ಡ್ ಸೇರಿದಂತೆ ವಿವಿಧ ರಕ್ಷಣಾ ಇಲಾಖೆಯ ಅಕಾರಿಗಳು, ಸಿಬ್ಬಂದಿಗಳಿಗೆ, ಮಾಧ್ಯಮ ಬಂಧುಗಳಿಗೆ, ಇತರ ಎಲ್ಲಾ ಸಿಬ್ಬಂದಿ ವರ್ಗದವರಿಗೆ ನನ್ನ ವಂದನೆಗಳನ್ನು ಸಮರ್ಪಿಸುತ್ತೇನೆ.

ಹಾಗೆಯೇ ಬಿಜೆಪಿ ಪರವಾಗಿ ಕೆಲಸ ಮಾಡಿದ ಎಲ್ಲಾ ಬಿಜೆಪಿ ಕಾರ್ಯಕರ್ತ ಬಂಧುಗಳಿಗೆ, ಬಿಜೆಪಿಯ ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲೆಯ ಎಲ್ಲಾ ಮುಖಂಡರಿಗೆ, ಮನೆ ಮನೆಗೆ ಭೇಟಿ ಮಾಡಿ ಮತದಾನಕ್ಕೆ ಉತ್ತೇಜಿಸಿದ ನನ್ನ ಬಿಜೆಪಿಯ ತಾಯಂದಿರಿಗೆ, ಸಹೋದರ, ಸಹೋದರಿಯರಿಗೆ ನನ್ನ ಹೃದಯ ಅಂತರಾಳದ ನಮನಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.