ಕರಾವಳಿ

ಶ್ರೀಲಂಕಾ ಸರಣಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರಿಗೆ ಮಹಿಳಾ ಕಾಂಗ್ರೆಸ್‌ನಿಂದ ಶ್ರದ್ಧಾಂಜಲಿ

Pinterest LinkedIn Tumblr

ಮಂಗಳೂರು, ಎಪ್ರಿಲ್.28: ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಸರಣಿ ಬಾಂಬ್ ಸ್ಫೋಟ ಘಟನೆಯಲ್ಲಿ ಆತ್ಮಾಹುತಿ ದಾಳಿಗೆ ಬಲಿಯಾದವರ ಆತ್ಮಕ್ಕೆ ಶಾಂತಿಕೋರಿ ಶನಿವಾರ ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಶ್ರದ್ಧಾಂಜಲಿ ಸಭೆ ನಡೆಯಿತು.

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನ ಮುಂಭಾಗದಲ್ಲಿ ‘ಅಸತೋಮ ಸದ್ಗಮಯ, ತಮಸೋಮ ಜ್ಯೋತಿರ್ಗಮಯ’ ಶಾಂತಿಮಂತ್ರ ಪಠಿಸಿ, ಮೊಂಬತ್ತಿ ಹತ್ತಿಸಿ ಮೃತಪಟ್ಟವರ ಆತ್ಮಕ್ಕೆ ಶಾಂತಿಕೋರಿ ಮೌನಾಚರಣೆ ಆಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ, ಜಿಲ್ಲಾ ಕಾಂಗ್ರೆಸ್‌ನ ವಕ್ತಾರೆ ಮರಿಯಮ್ಮ ಥಾಮಸ್, ಶಾಂತಲಾ ಗಟ್ಟಿ, ತನ್ವೀರ್ ಶಾ, ರೂಪಾ ಚೇತನ್, ಮಾಜಿ ಮೇಯರ್ ಜೆಸಿಂತಾ, ಆಶಾ ಡಿಸಿಲ್ವಾ, ನಾಗವೇಣಿ, ಮೆಬಲ್ ಡಿಸೋಜ, ಮರಿಯಾ ರೇಖಾ, ಲಿಲ್ಲಿ ಬರ್ಬೊಜಾ, ವಿಜಯಲಕ್ಷ್ಮಿ, ಭಾರತಿ ಬಿ.ಎಂ., ಪ್ರಭಾವತಿ, ಸುರೇಖಾ ಚಂದ್ರಹಾಸ್, ಹೆಸ್ತರ್ ಮತ್ತಿತರರು ಉಪಸ್ಥಿತರಿದ್ದರು.

Comments are closed.