ಕರಾವಳಿ

ನಾಪತ್ತೆಯಾಗಿದ್ದ ವ್ಯಕ್ತಿ ಉಳ್ಳಾಲ ಸೇತುವೆಯಡಿ ಶವವಾಗಿ ಪತ್ತೆ : ಆತ್ಮಹತ್ಯೆ ಶಂಕೆ!..

Pinterest LinkedIn Tumblr

ಮಂಗಳೂರು, ಮೇ 15: ಮೂರು ದಿನದ ಹಿಂದೆ ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಶವ ಉಳ್ಳಾಲ – ತೊಕ್ಕೊಟ್ಟು ನೇತ್ರಾವತಿ ಸೇತುವೆಯಡಿ ಬುಧವಾರ ಪತ್ತೆಯಾಗಿದ್ದು, ಆತ್ಮಹತ್ಯೆಗೈದಿರಬೇಕು ಎಂದು ಶಂಕಿಸಲಾಗಿದೆ.

ಮೃತ ವ್ಯಕ್ತಿಯನ್ನು ಕೋಟೆಕಾರ್ ಸಮೀಪದ ಮಾಡೂರಿನ ಲೋಕಯ್ಯ (70) ಎಂದು ಗುರುತಿಸಲಾಗಿದೆ.

ರಾ.ಹೆ.66ರ ಉಳ್ಳಾಲ ಸೇತುವೆಯಡಿ ಮೃತದೇಹ ಕಂಡು ಬಂದಿದೆ. ಉಳ್ಳಾಲ ನೇತ್ರಾವತಿ ಸೇತುವೆಯಡಿ ಮೃತದೇಹ ತೇಲುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರು. ಮೃತದೇಹ ಊದಿದ್ದು, ಮುಖ ಗುರುತು ಹಿಡಿಯದ ಸ್ಥಿತಿಯಲ್ಲಿದೆ.

ಮೂರು ದಿನದ ಹಿಂದೆ ಕಾಣೆಯಾಗಿದ್ದ ಇವರು ನದಿಗೆ ಹಾರಿ ಆತ್ಮಹತ್ಯೆಗೈದಿರಬೇಕು ಎಂದು ಶಂಕಿಸಲಾಗಿದೆ. ಕೃತ್ಯಕ್ಕೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಲಕ್ಕೆತ್ತಿ ಮುಂದಿನ ಕ್ರಮ ಕೈಗೊಂಡರು.

Comments are closed.