ಕರಾವಳಿ

ಮತ ಎಣಿಕೆ ಹಿನ್ನೆಲೆ : ಮಂಗಳೂರು-ಉಡುಪಿ ಹೆದ್ದಾರಿಯಲ್ಲಿ ಸಂಚಾರ ಬಂದ್ – ವಾಹನಗಳಿಗೆ ಬದಲಿ ವ್ಯವಸ್ಥೆ

Pinterest LinkedIn Tumblr

ಮಂಗಳೂರು ಮೇ 23 : ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿರುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆಯ ಕೇಂದ್ರ ಸುರತ್ಕಲ್ ಹೆದ್ದಾರಿ ಪಕ್ಕದಲ್ಲೇ ಇರುವುದರಿಂದ ಮಂಗಳೂರು-ಉಡುಪಿ ಹೆದ್ದಾರಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಶಸಿಕಾಂಥ್ ಸೆಂಥಿಲ್ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮತ ಎಣಿಕೆಯ ಕೇಂದ್ರ ಸುರತ್ಕಲ್ ಹೆದ್ದಾರಿ ಪಕ್ಕದಲ್ಲೇ ( ಎನ್‌ಐಟಿಕೆ) ಇರುವುದರಿಂದ ವಾಹನ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಮುಂಜಾನೆ 7ರಿಂದ ಸಂಜೆಯ ತನಕ ರಸ್ತೆ ಸಂಚಾರ ಬದಲಾವಣೆ ಇರುತ್ತದೆ. ಜನರು ಇದಕ್ಕೆ ಸಹಕರಿಸಿ ಶಾಂತಿಯುತ ಮತ ಎಣಿಕೆಗೆ ಸಹಕಾರ ನೀಡಬೇಕೆಂದು ತಿಳಿಸಿದ್ದಾರೆ.

ಮಂಗಳೂರಿನಿಂದ ಉಡುಪಿಗೆ ಸಂಚರಿಸುವಂತಹ ಘನ ವಾಹನಗಳಿಗೆ ಪರ್ಯಾಯ ಮಾರ್ಗ ಸೂಚಿಸಲಾಗಿದ್ದು, ಕಾವೂರು ಜಂಕ್ಷನ್-ಬಜ್ಪೆ-ಕಟೀಲು-ಕಿನ್ನಿಗೋಳಿ ಮಾರ್ಗವಾಗಿ ಸಂಚರಿಸುವಂತೆ ಅವರು ತಿಳಿಸಿದ್ದಾರೆ. ಇದೇ ಮಾರ್ಗದಲ್ಲಿ ಉಡುಪಿ ಕಡೆಯಿಂದ ಮಂಗಳೂರಿಗೆ ಸಂಚರಿಸುವಂತೆ ಹೇಳಿದ್ದಾರೆ.

ಇನ್ನು ಮಂಗಳೂರು-ಉಡುಪಿ ಸಂಚಾರ ನಡೆಸುವ ಬಸ್ ಗಳು ಎನ್ ಐ ಟಿಕೆ ಬಳಿ ನಿಲ್ಲಿಸುವುದನ್ನು ಕಡ್ಡಾಯವಾಗಿ ನಿಷೇದಿಸಲಾಗಿದೆ ಎಂದು ಅವರು ಅದೇಶ ನೀಡಿದ್ದಾರೆ. ಉಡುಪಿಗೆ ಸಂಚರಿಸುವ ಲಘ ವಾಹನಗಳಿಗೆ ಎನ್ ಐ ಟಿಕೆ ಲೈಟ್ ಹೌಸ್-ರೆಡ್ ಕ್ರಾಸ್ ನಲ್ಲಿ ಎಡಕ್ಕೆ ತಿರುಗಿ ಉಡುಪಿಗೆ ಸಂಚರಿಸುವಂತೆ ಅವರು ಸೂಚಿಸಿದ್ದಾರೆ. ಇನ್ನು ಉಡುಪಿಯಿಂದ ಮಂಗಳೂರಿಗೆ ಬರುವಂತಹ ಲಘ ವಾಹನಗಳು ಚೇಳ್ಯಾರು ಕ್ರಾಸ್ ನಿಂದ ಎಡಕ್ಕೆ ಬಂದು ಮಧ್ಯ ವೃತ್ತದ ಮೂಲಕ ಮುಂಚೂರು ಕ್ರಾಸ್ ನಲ್ಲಿ ಹೆದ್ದಾರಿಯನ್ನು ಸೇರುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಮಾತನಾಡಿ, ಮತ ಎಣಿಕೆಯ ಯಾವೂದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದ್ದು, ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸಿಎಪಿಎಫ್ ತುಕಡಿ ಸೇರಿ 5 ಕೆಎಸ್ ಆರ್ ಪಿ ತುಕಡಿ, 12 ಸಿಎಆರ್ ತುಕಡಿ, ಇಬ್ಬರು ಡಿಸಿಪಿ, 6 ಮಂದಿ ಎಸಿಪಿ, 17 ಮಂದಿ ಪಿಐ, 48 ಮಂದಿ ಪಿಎಸ್ಐ, 66 ಮಂದಿ ಎಎಸ್ಐ, 112 ಮಂದಿ ಹೆಚ್ಸಿ, 224 ಮಂದಿ ಪೇದೆಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Comments are closed.