(ಕಡತ ಚಿತ್ರ)
ಮಂಗಳೂರು, ಮೇ.30 : ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಜಯ ಸಾಧಿಸಿ ಇದೀಗ ಎರಡನೇ ಬಾರಿಗೆ ದೇಶದ ಪ್ರಧಾನ ಮಂತ್ರಿಯಾಗಿ ರೇಂದ್ರ ಮೋದಿರವರು ಇಂದು ತಾ: 30.05.2019 ರಂದು ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ
ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯ ಎದುರು ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆಯನ್ನು ಸಾಯಂಕಾಲ ಗಂಟೆ 6.30 ರಿಂದ ವ್ಯವಸ್ಥೆ ಮಾಡಲಾಗಿದೆ.
ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಈ ಅದ್ಭುತ ಕ್ಷಣದಲ್ಲಿ ಭಾಗಿಯಾಗಬೇಕೆಂದು ಪಕ್ಷದ ಜಿಲ್ಲಾ ಘಟಕದ ಮುಖಂಡರು ವಿನಂತಿಸಿದ್ದಾರೆ.
ಅಟೋ ರಿಕ್ಷಾ ಚಾಲಕರಿಂದ ಉಚಿತ ಪ್ರಯಾಣ ಸೇವೆ :
ಮೋದಿ ಪ್ರಮಾಣ ವಚನಕ್ಜೆ ಉಪ್ಪಿನಂಗಡಿ ಯಲ್ಲಿ 15 ಅಟೋ ರಿಕ್ಷಾ ಚಾಲಕರಿಂದ ವಿನೂತನ ಸೇವೆ. 5 ಕಿ ಮೀ ವ್ಯಾಪ್ತಿಯೊಳಗಿನ ಪ್ರಯಾಣಿಕರಿಗೆ ದಿನವಿಡೀ ಉಚಿತ ಪ್ರಯಾಣ ಸೇವೆ. ದೇಶದ ಭವ್ಯ ಭವಿಷ್ಯದಲ್ಲಿ ಜನ ಸಾಮಾನ್ಯರಿಗೆ ಅನುಕೂಲವಿದೆ ಎಂಬುವುದಕ್ಕೆ ಸಾಕ್ಷಿಯಾಗಿ ಈ ರೀತಿಯ ಉಚಿತ ಸೇವೆ.
ಉಚಿತ ಬಸ್ ಸೇವೆ :
ಭಾರತ ದೇಶದ 14ನೇ ಪ್ರಧಾನಮಂತ್ರಿಯಾಗಿ ಸನ್ಮಾನ್ಯ ಶ್ರೀ ದಾಮೋದರದಾಸ್ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುವ ಪ್ರಯುಕ್ತ ಮೂಡಬಿದ್ರೆ ಕಿನ್ನಿಗೋಳಿ ಹಳೆಯಂಗಡಿ ಸುರತ್ಕಲ್ ಮಂಗಳೂರಿಗೆ ಹೋಗುವ ಕೋಟ್ಯಾನ್ ಬಸ್ ಉಚಿತ ಸೇವೆಯನ್ನು ನೀಡಲಿರುವರು ಎಂದು ಬಸ್ಸಿನ ಚಾಲಕರು ತಿಳಿಸಿದ್ದಾರೆ.
Comments are closed.