ಕರಾವಳಿ

ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿ ಸಮೀಪದ ಚರಂಡಿ ಸಮಸ್ಯೆ ಬಗೆಹರಿಸುವಂತೆ ಸಂಸದ ನಳಿನ್ ಸೂಚನೆ

Pinterest LinkedIn Tumblr

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರು  ಪಂಪ್ವೆಲ್ ಮೇಲ್ಸೇತುವೆ ಕಾಮಗಾರಿ ಯನ್ನು ವೀಕ್ಷಿಸಿದರು.

ಅಧಿಕಾರಿಗಳೊಂದಿಗೆ ಸಂಪೂರ್ಣ ಮಾಹಿತಿಯನ್ನು ಪಡೆದ ಬಳಿಕ ಸ್ಥಳೀಯರ ಜೊತೆ ಸಮಸ್ಯೆಗಳ ಬಗ್ಗೆ ಮಾತನಾಡಿ, ಮೇಲ್ಸೇತುವೆಯ ಬದಿಯಲ್ಲಿ ಉಂಟಾಗಿರುವ ಚರಂಡಿ ಸಮಸ್ಯೆಯನ್ನು ಅತೀ ಶೀಘ್ರದಲ್ಲಿ ಬಗೆಹರಿಸುವಂತೆ ಹಾಗೂ ಸರ್ವಿಸ್ ರಸ್ತೆಯ ಸಮಸ್ಯೆಗಳನ್ನೂ ಸಹ ಬಗೆಹರಿಸಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಆದೇಶಿಸಿದರು.

ಈ ಸಂದರ್ಭದಲ್ಲಿ ಶರಣ್ ಪಂಪವೇಲ್, ಜಗದೀಶ್ ಶೇಣವ, ಸುಧೀರ್ ಶೆಟ್ಟಿ ಕಣ್ಣೂರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Comments are closed.