ಕರಾವಳಿ

ಕೋಟ ಡಬ್ಬಲ್ ಮರ್ಡರ್ ಕೇಸಿನ ಆರೋಪಿ ಪ್ರಣವ್ ಜಾಮೀನು ಅರ್ಜಿ ವಜಾ

Pinterest LinkedIn Tumblr

ಕುಂದಾಪುರ: ಕೋಟ ಸಮೀಪದ ಮಣೂರಿನಲ್ಲಿ ಜ.26 ರ ತಡರಾತ್ರಿ ನಡೆದ ಭರತ್ ಹಾಗೂ ಯತೀಶ್ ಕಾಂಚನ್ ಎನ್ನುವರ ಜೋಡಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ 17 ಆರೋಪಿಗಳ ಪೈಕಿ ಜಾಮೀನು ನೀಡುವಂತೆ ವಕೀಲರ ಮೂಲಕ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದ ಆರೋಪಿ ಪ್ರಣವ್ ರಾವ್ ಎಂಬಾತನ ಜಾಮೀನು ಅರ್ಜಿಯನ್ನು ಇಲ್ಲಿನ ಜಿಲ್ಲಾ ಮತ್ತು ಹೆಚ್ಚುವರಿ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರಕಾಶ್ ಖಂಡೇರಿ ತಿರಸ್ಕರಿಸಿದ್ದಾರೆ.

ಆರೋಪಿ ಪ್ರಣವ್ ರಾವ್ ಭದ್ರಾವತಿ ಮೂಲದವನಾಗಿದ್ದು ಉಡುಪಿಯಲ್ಲಿ ನೆಲೆಸಿದ್ದಾನೆ. ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಯಾಗಿದ್ದ ಈತ ಜೋಡಿ ಕೊಲೆ ಆರೋಪಿತರಿಗೆ ಹಣ ಮತ್ತು ಮೊಬೈಲ್ ನೀಡಿ ಸಹಕರಿಸಿದ್ದ ಆರೋಪದಡಿಯಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ. ಈತನ ಮೇಲೆ ಐಪಿಸಿ ಸೆಕ್ಷನ್ 212 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ನ್ಯಾಯಾಲಯಕ್ಕೆ ಸದ್ಯ ದೋಷಾರೋಪಣೆ ಪಟ್ಟಿ ಸಲಿಕೆಯಾಗಿದೆ. ಜನತೆಯನ್ನು ಬೆಚ್ಚಿಬೀಳಿಸಿದ ಜೋಡಿ ಕೊಲೆ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯಾಧಾರಗಳ ವಿಚಾರಣೆ ಇನ್ನಷ್ಟೇ ನಡೆಯಬೇಕಿದ್ದು ಈ ಹಂತದಲ್ಲಿ ಆರೋಪಿಗೆ ಜಾಮೀನು ನೀಡುವುದರಿಂದ ಸಾಕ್ಷಿ ನಾಶ ಸಂಭವವಿದೆ ಎಂದು ಪ್ರಾಸಿಕ್ಯೂಶನ್ ಪರ ಜಿಲ್ಲಾ ಸರ್ಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿಯವರು ವಾದ ಮಂಡಿಸಿದ್ದು ಜಾಮೀನು ಅರ್ಜಿ ವಜಾಗೊಳಿಸುವಂತೆ ಮನವಿ ಮಾಡಿದ್ದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು ಆರೋಪಿ ಪ್ರಣವ್ ರಾವ್ ಜಾಮೀನು ಅರ್ಜಿ ವಜಾಗೊಳಿಸಿದ್ದಾರೆ.

(ಆರೋಪಿ ಪ್ರಣವ್ ರಾವ್)

ಪ್ರಕರಣದ ಪ್ರಮುಖ ಆರೋಪಿ ರೆಡ್ಡಿ ಸೋದರರಾದ ಹರೀಶ್ ರೆಡ್ಡಿ, ರಾಜಶೇಖರ್ ರೆಡ್ಡಿ, ಚಂದ್ರಶೇಖರ ರೆಡ್ಡಿ, ರತೀಶ್ ಎಂ. ಕರ್ಕೇರಾ, ಒಳಸಂಚು ನಡೆಸಿದ ಆರೋಪ ಹೊತ್ತಿರುವ ರಾಘವೇಂದ್ರ ಕಾಂಚನ್, ಸಹಕರಿಸಿದ ಆರೋಪದಲ್ಲಿ ಡಿ.ಎ.ಆರ್. ಪೊಲೀಸ್‌ ಸಿಬ್ಬಂದಿಗಳಾದ ಪವನ್‌ ಅಮೀನ್‌, ವಿರೇಂದ್ರ ಆಚಾರ್ಯ, ವಿದ್ಯಾರ್ಥಿ ಪ್ರಣವ್ ರಾವ್, ಮಹಮ್ಮದ್ ತೌಸೀಪ್, ಹಾಗೂ ಪ್ರಕರಣದಲ್ಲಿ ಭಾಗಿಯಾದ ಮಹೇಶ್, ಮೆಡಿಕಲ್ ರವಿ, ರವಿಚಂದ್ರ, ಅಭಿಷೇಕ ಅಲಿಯಾಸ್ ಅಭಿ ಪಾಲನ್ ,ಸಂತೋಷ್ ಕುಂದರ್, ನಾಗರಾಜ ಅಲಿಯಾಸ್ ರೊಟ್ಟಿ ನಾಗರಾಜ, ಸುಜಯ್, ಶಂಕರ ಮೊಗವೀರ, ಸದ್ಯ ಜೈಲಿನಲ್ಲಿದ್ದಾರೆ.

ಅಂದು ನಡೆದಿದ್ದೇನು?
ಜ.26 ಶನಿವಾರ ತಡರಾತ್ರಿ ಕೊಲೆಯಾದ ಭರತ್ ಮತ್ತು ಯತೀಶ್ ಇಬ್ಬರು ಕೂಡ ಸ್ನೇಹಿತ ಲೋಹಿತ್ ಕರೆಗೆ ಓಗೊಟ್ಟು ಆತನನ್ನು ರಕ್ಷಿಸಲು ಬಂದಿದ್ದರು. ಅಂದು ತಡರಾತ್ರಿ ಟಾಯ್ಲೆಟ್ ಪಿಟ್ ವಿಚಾರದಲ್ಲಿ ರೌಡಿಶೀಟರ್ ಸೋದರರು ಮತ್ತು ತಂಡ ಲೋಹಿತ್ ಮೇಲೆ‌ ಅಟ್ಯಾಕ್ ಮಾಡಲು‌ ಆತನ‌ ಮನೆ ಮುಂದೆ ಆಗಮಿಸಿದ್ದರು. ಈ ವೇಳೆ ಗಲಾಟೆ ತಪ್ಪಿಸಲು ಬಂದ ಯತೀಶ್ ಹಾಗೂ ಭರತನನ್ನು ದುಷ್ಕರ್ಮಿಗಳು ಮನಸ್ಸೋಇಚ್ಚೆ ತಲವಾರು ದಾಳಿ ನಡೆಸಿ ಕೊಂದಿದ್ದರು. ಬಳಿಕ ಎಲ್ಲರೂ ಅಲ್ಲಿಂದ ಪರಾರಿಯಾಗಿದ್ದು ಮನೆಯಿಂದ ಅನತಿ ದೂರದಲ್ಲಿ ತಲವಾರು ಎಸೆದಿದ್ದರು. ಕೆಲವೇ ದಿನಗಳಲ್ಲಿ ಪೊಲೀಸರು ಎಲ್ಲಾ ಆರೋಪಿಗಳನ್ನು ಬಂಧಿಸಿದ್ದರು.

ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದ ಸುದ್ದಿಗಳು-

ಕೋಟದಲ್ಲಿ ತಲವಾರು ದಾಳಿ: ಕ್ಷುಲ್ಲಕ ಕಾರಣಕ್ಕೆ ಹರಿಯಿತು ಇಬ್ಬರ ನೆತ್ತರು (Updated)

ಆಪ್ತಮಿತ್ರರಿಬ್ಬರ ಬರ್ಬರ ಕೊಲೆ ಪ್ರಕರಣ: ಕೋಟ ಹೆದ್ದಾರಿಯಲ್ಲಿ ಶವವಿಟ್ಟು ಪ್ರತಿಭಟನೆ (Video)

ಟಾಯ್ಲೆಟ್ ಪಿಟ್ ನಿರ್ಮಾಣದ ತಕರಾರು: ಆಪ್ತ ಮಿತ್ರರಿಬ್ಬರ ಮೇಲೆ ತಲವಾರು ಬೀಸಿದ ಹಂತಕರು

ಕೋಟ ಆಪ್ತಮಿತ್ರರನ್ನು ಕೊಂದ ಕೊಲೆಗಾರರ ಪತ್ತೆಗೆ ಚುರುಕುಗೊಂಡ ತನಿಖೆ

ಕೋಟದಲ್ಲಿ ಸ್ನೇಹಿತರಿಬ್ಬರ ಮರ್ಡರ್ ಕೇಸ್: ಆರೋಪಿಗಳಿಗಾಗಿ ಮುಂದುವರಿದ ಶೋಧ

ಕೋಟ ಅವಳಿ ಕೊಲೆ: ಹರೀಶ್ ರೆಡ್ಡಿ ಸಹಚರರು ಇನ್ನೂ ಭೂಗತ!

ಇನ್ನೂ ಪತ್ತೆಯಾಗದ ಕೊಲೆಗಾರರು; ನ್ಯಾಯಕ್ಕಾಗಿ ಆಗ್ರಹಿಸಿ ಫೆ.3ಕ್ಕೆ ಕೋಟ ಬಂದ್

ಕೋಟದಲ್ಲಿ ಅವಳಿ ಕೊಲೆ ಪ್ರಕರಣ: ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಬಂದ್, ಪ್ರತಿಭಟನೆ (Video)

ಕೋಟ ಅವಳಿ ಕೊಲೆ ಪ್ರಕರಣದ ಆರೋಪಿಗಳ ಬಂಧನ? ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ ಅಂತೆಕಂತೆ!

ಕೋಟ ಡಬ್ಬಲ್ ಮರ್ಡರ್ ಕೇಸ್: ಇಬ್ಬರು ಆರೋಪಿಗಳ ಬಂಧನ

ಕೋಟ ಸ್ನೇಹಿತರ ಕೊಲೆಗೆ ಜಿ.ಪಂ ಸದಸ್ಯನೇ ಸೂತ್ರಧಾರಿ; ಪೊಲೀಸರಿಂದ 6 ಮಂದಿ ಬಂಧನ

ಕೋಟ ಅವಳಿ ಕೊಲೆಯ ಆರು ಆರೋಪಿಗಳಿಗೆ ಫೆ.15ರವರೆಗೆ ಪೊಲೀಸ್ ಕಸ್ಟಡಿ, ಮುಂದುವರಿಯಲಿದೆ ತನಿಖೆ

ಕೋಟ ಜೋಡಿ ಕೊಲೆ ಪ್ರಕರಣ ನಡೆದ ಮನೆಯಲ್ಲಿ ಮಹಜರು; ಕೃತ್ಯಕ್ಕೆ ಬಳಸಿದ್ದ 2 ಬೈಕ್ ವಶ

ಕೋಟ ಸ್ನೇಹಿತರಿಬ್ಬರ ಕೊಲೆ ಪ್ರಕರಣ: ರೆಡ್ಡಿಗೆ ಸಹಕರಿಸಿದ ಇಬ್ಬರು ಪೊಲೀಸರು ಅರೆಸ್ಟ್

ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡಿದ ಬಿಜೆಪಿಯವರಿಂದ ಕೊಲೆಗಡುಕರಿಗೆ ಬೆಂಬಲ: ಮಾಜಿ ಸಚಿವ ಸೊರಕೆ

ಕೋಟ ಸ್ನೇಹಿತರಿಬ್ಬರ ಕೊಲೆಯಲ್ಲಿ ಭಾಗಿಯಾದವನೂ ಸೇರಿ ಮತ್ತೆ ಐದು ಮಂದಿ ಬಂಧನ

ಕೋಟ ಜೋಡಿ ಕೊಲೆಗೆ ನ್ಯಾಯ ಕೇಳಿ ದೇವರ ಮೊರೆ ಹೋದವರಿಗೆ ಸಿಕ್ಕಿತು ಭರವಸೆಯ ನುಡಿ (Video

ಕೋಟ ಡಬಲ್ ಮರ್ಡರ್ ಕೇಸಿನ ಪ್ರಮುಖ ಆರೋಪಿ ಚಂದ್ರಶೇಖರ್ ರೆಡ್ಡಿ ಸಮೇತ ಇನ್ನೋರ್ವ ಬಂಧನ(Updated)

ಕೋಟ ಡಬಲ್ ಮರ್ಡರ್ ಕೇಸಿನ 16 ಆರೋಪಿಗಳು ನ್ಯಾಯಾಲಯಕ್ಕೆ ಹಾಜರು: ಇಬ್ಬರಿಗೆ ಪೊಲೀಸ್ ಕಸ್ಟಡಿ (Video)

ಕೋಟ ಡಬಲ್ ಮರ್ಡರ್ ಆರೋಪಿ ಜಿ.ಪಂ. ಸದಸ್ಯ ರಾಘವೇಂದ್ರ ಕಾಂಚನ್ ಬಿಜೆಪಿಯಿಂದ  ಅಮಾನತು

ಕೋಟ ಮರ್ಡರ್ ಕೇಸಿನ ಮೂವರು ಆರೋಪಿಗಳಿಗೆ ಜೈಲೋ? ಬೇಲೋ? ಫೆ.19 ಕ್ಕೆ ಆದೇಶ

ಕೋಟ ಮರ್ಡರ್ ಕೇಸಿನ ಮೂವರು ಆರೋಪಿಗಳಿಗೆ ಸದ್ಯ ಜೈಲೇ ಗತಿ; ಓರ್ವನಿಗೆ ಪೊಲೀಸ್ ಕಸ್ಟಡಿ

ಕೋಟ ಜೋಡಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಕೋಟ ಜೋಡಿ ಕೊಲೆ ಪ್ರಕರಣ: ಆರು ಆರೋಪಿಗಳ ಜಾಮೀನು ಅರ್ಜಿ ತಿರಸ್ಕೃತ

Comments are closed.