ಮಂಗಳೂರು : ಜಮ್ಮು ಕಾಶ್ಮೀರಕ್ಕೆ ಕಲ್ಪಿಸಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿರುವುದು ಬಿಜೆಪಿ ಸರ್ಕಾರದ ಐತಿಹಾಸಿಕ ನಿರ್ಣಯ ವಾಗಿದೆ. ದೇಶದೆಲ್ಲೆಡೆ ಜನತೆ ಕೇಂದ್ರದ ದಿಟ್ಟ ನಿರ್ಧಾರವನ್ನು ಬೆಂಬಲಿಸಿದ್ದಾರೆ. ಭಾರತದ ಅವಿಭಾಜ್ಯ ಅಂಗವಾಗಿರುವ ಜಮ್ಮು ಕಾಶ್ಮೀರದಲ್ಲಿ ಇನ್ನು ಶಾಂತಿ ನೆಲೆಸಲಿದೆ ಎಂದು ದ.ಕ.ಜಿಲ್ಲಾ ಸಂಸದ ನಳಿನ್ಕುಮಾರ್ ಕಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದರೆ ಕಾಶ್ಮೀರದ ವಿಶೇಷ ಸ್ಥಾನಮಾನನ ರದ್ದು ಮಾಡುವುದಾಗಿ ಚುನಾವಣೆಯ ಪ್ರಣಾಳಿಕೆ ಯಲ್ಲಿ ತಿಳಿಸಲಾಗಿತ್ತು. ಈಗ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನುಡಿದಂತೆ ನಡೆದಿದ್ದಾರೆ.
ಕೋಟ್ಯಾಂತರ ದೇಶಪ್ರೇಮಿಗಳ ದಶಕಗಳ ಬೇಡಿಕೆ ಇಂದು ಈಡೇರಿದೆ. ಮೋದಿ ಅವರ ನಾಯಕತ್ವದಲ್ಲಿ ಅಖಂಡ ಭಾರತ ಕಲ್ಪನೆ ಸಾಕಾರಗೊಳ್ಳುತ್ತಿದೆ ಎಂದು ಸಂಸದರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Comments are closed.