ಕರ್ನಾಟಕ

ಬೆಳಗಾವಿಯ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

Pinterest LinkedIn Tumblr

ಬೆಳಗಾವಿ: ಸಿಎಂ ಬಿ.ಎಸ್​. ಯಡಿಯೂರಪ್ಪ ಗುರುವಾರ ಬೆಳಗಾವಿಯ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಅವರು ಭಾರಿ ಮಳೆಯಿಂದಾಗಿ ಹಾನಿಗೊಂಡಿರುವ ಪ್ರದೇಶಗಳಿಗೂ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಅಲ್ಲದೆ ಮಳೆಯಿಂದಾಗಿ ಸಂತ್ರಸ್ತರಾಗಿರುವವರಿಗೆ ತಕ್ಷಣವೇ ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

ಪ್ರವಾಹಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಕ್ಕೆ ನೆರವಾಗಲು ವಿಶೇಷ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ತಂಡವನ್ನು ಬೆಳಗಾವಿಗೆ ಕಳುಹಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇನೆ. ಅಲ್ಲದೆ, ಸೇನಾ ಹೆಲಿಕಾಪ್ಟರ್​ಗಳನ್ನು ರವಾನಿಸುವಂತೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರಿಗೆ ಕೋರಿಕೊಂಡಿದ್ದೇನೆ. ಗುರುವಾರ ಸಂಜೆ ವೇಳೆಗೆ ಹೆಲಿಕಾಪ್ಟರ್​ ಮತ್ತು ರಕ್ಷಣಾ ಕಾರ್ಯದ ಸಿಬ್ಬಂದಿ ಬೆಳಗಾವಿ ತಲುಪುವ ನಿರೀಕ್ಷೆ ಇದೆ ಎಂದರು.

Comments are closed.